Wednesday, May 15, 2024
Homeಕರಾವಳಿಬೆಂಗಳೂರು ಯುವಕನ ಕಿಡ್ನಾಪ್ & ಕೊಲೆ ಪ್ರಕರಣ: ಎರಡನೇ ದಿನ ಚಾರ್ಮಾಡಿ ಘಾಟ್ ನಲ್ಲಿ ಶವಕ್ಕಾಗಿ...

ಬೆಂಗಳೂರು ಯುವಕನ ಕಿಡ್ನಾಪ್ & ಕೊಲೆ ಪ್ರಕರಣ: ಎರಡನೇ ದಿನ ಚಾರ್ಮಾಡಿ ಘಾಟ್ ನಲ್ಲಿ ಶವಕ್ಕಾಗಿ ಹುಡುಕಾಟ; ಶವ ಬಿಸಾಕಿದ ಸ್ಥಳ ಗುರುತಿಸುವಿಕೆಯಲ್ಲಿ ಆರೋಪಿಗಳ ಕಣ್ಣಾಮುಚ್ಚಾಲೆ ಆಟ

spot_img
- Advertisement -
- Advertisement -

ಬೆಳ್ತಂಗಡಿ :ಸುಮಾರು ಒಂಬತ್ತು ತಿಂಗಳ ಹಿಂದೆ ಚಿಕ್ಕಬಳ್ಳಾಪುರದಲ್ಲಿ ಕೊಲೆ ಮಾಡಿದ ಯುವಕನ ಶವವನ್ನು ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ಎಸೆಯಲಾಗಿದೆ ಎಂದು ಆರೋಪಿಗಳು ತಿಳಿಸಿದ್ದು ಅದರಂತೆ ಬೆಂಗಳೂರು ಎಸಿಪಿ ರಾಜೇಂದ್ರ ನೇತೃತ್ವದಲ್ಲಿ ಕಬ್ಬನ್ ಪಾರ್ಕ್ ಇನ್ಸ್ಪೆಕ್ಟರ್ ಚೈತನ್ಯ ಮತ್ತು ಅಶೋಕ್‌ ನಗರ ಠಾಣೆ ಪಿಎಸ್ಐ ಅಶ್ವೀನಿ ಮತ್ತು ತಂಡದವರು ಶವ ಪತ್ತೆಹಚ್ಚುವ ಕಾರ್ಯಾಚರಣೆ ನಡೆಸುತ್ತಿದ್ದು ಎರಡನೇ ದಿನದ ಕಾರ್ಯಾಚರಣೆಯಲ್ಲಿ ಕೂಡ ಯಾವುದೇ ಸುಳಿವು ಪತ್ತೆಯಾಗಿಲ್ಲ.

ಶವ ಹುಡುಕಾಟದ ಕಾರ್ಯಾಚರಣೆ: ಚಿಕ್ಕಮಗಳೂರು ಜಿಲ್ಲೆ – ದಕ್ಷಿಣ ಕನ್ನಡ ಜಿಲ್ಲೆಗೆ ಸೇರಿದ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿ ಮತ್ತು ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಘಾಟಿಯ ಪ್ರದೇಶಗಳ ಕಣಿವೆಗಳಲ್ಲಿ ಮೂಡಿಗೆರೆಯ ಸಾಮಾಜಿಕ ಸಕ್ರಿಯ ಸೇವಾ ಸಂಸ್ಥೆ(ರಿ)ಯ ಫೀಸ್ ಮೋನು , ಅರೀಫ್ ಬಣಕಲ್, ಅಬ್ದುಲ್ ರಹಿಮಾನ್, ಅಶೀಕ್, ರಹೀಂ, ಅಹಮ್ಮದ್ ಭಾವ, ಉಮಾರ್ ಮತ್ತಿತರರ ಸಹಕಾರದಲ್ಲಿ ಜ.3 ಮತ್ತು ಜ.4 ರಂದು ಎರಡು ದಿನ ಹುಡುಕಾಟ ಆರಂಭಿಸಿಲಾಗಿದ್ದು ಯಾವುದೇ ಶವದ ಸುಳಿವು ಈವೆರೆಗೆ ಪತ್ತೆಯಾಗಿಲ್ಲ.

ಆರೋಪಿಗಳಿಂದ ಸ್ಥಳ ಗುರುತಿಸುವಿಕೆಯಲ್ಲಿ ಗೊಂದಲ:
ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಶರತ್ ಮತ್ತು ಧನುಷ್ ಎಂಬವರನ್ನು ಬೆಂಗಳೂರು ಪೊಲೀಸರು ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ಶವ ಪತ್ತೆ ಹಚ್ಚಲು ಬಿಗಿ ಭದ್ರತೆಯಲ್ಲಿ ಕರೆತಂದಿದ್ದು ಇಬ್ಬರು ಕೂಡ ಬೇರೆ ಬೇರೆಯಾಗಿ ಸ್ಥಳಗಳನ್ನು ಗುರುತಿಸುತ್ತಿದ್ದು ಇದರಿಂದ ಪೊಲೀಸರು ಗೊಂದಲಕ್ಕೆ ಸಿಲುಕಿಕೊಂಡಿದ್ದಾರೆ.

- Advertisement -
spot_img

Latest News

error: Content is protected !!