- Advertisement -
- Advertisement -
ಪುತ್ತೂರು, ಬೆಳ್ತಂಗಡಿ, ಸುಳ್ಯ ಕಡಬ ತಾಲೂಕಿನಾದ್ಯಂತ ಎರಡು ದಿನಗಳ ಕಾಲ ಸೆಕ್ಷನ್ 144 ರನ್ವಯ ನಿಷೇದಾಜ್ಞೆ ಜಾರಿಗೊಳಿಸಿಲಾಗಿದೆ. ಪುತ್ತೂರು ಸಹಾಯಕ ಆಯುಕ್ತರಾದ ಡಾ.ಯತೀಶ್ ಉಳ್ಳಾಲರವರು ಈ ಆದೇಶ ಹೊರಡಿಸಿದ್ದಾರೆ.
ಉಪ್ಪಿನಂಗಡಿಯಲ್ಲಿ ಡಿ 14 ರಂದು ರಾತ್ರಿ ನಡೆದ ಅಹಿತಕರ ಘಟನೆಯಿಂದಾಗಿ ಸಹಾಯಕ ಆಯುಕ್ತರು ಈ ಆದೇಶ ಹೊರಡಿಸಿದ್ದಾರೆ.
ಭಾರತೀಯ ದಂಡ ಪ್ರಕ್ರಿಯಾ ಸಂಹಿತೆ 1973 ಕಲಂ 144 ರನ್ವಯ ಪ್ರದತ್ತವಾದ ಅಧಿಕಾರದಡಿಯಲ್ಲಿ ಪುತ್ತೂರು ಉಪವಿಭಾಗಾಯಾದ್ಯಂತ ಅಂದರೆ ಪುತ್ತೂರು , ಬೆಳ್ತಂಗಡಿ , ಸುಳ್ಯ ಕಡಬ ತಾಲೂಕಿನಾದ್ಯಂತ 15/12/2021 ರಿಂದ 17/12/2011 ರ ಮಧ್ಯರಾತ್ರಿ 12:00 ಗಂಟೆಯವರೆಗೆ ನಿಷೇದಾಜ್ಞೆಯನ್ನು ವಿಧಿಸಿಲಾಗಿದೆ ಎಂದು ಸಹಾಯಕ ಆಯುಕ್ತರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
- Advertisement -