- Advertisement -
- Advertisement -
ಬೆಂಗಳೂರು; ಆರ್ ಸಿ ಬಿ ವಿಜಯೋತ್ಸವದ ವೇಳೆ ಕಾಲ್ತುಳಿತ ಉಂಟಾಗಿ 11 ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ. ದಯಾನಂದ್ ಸೇರಿದಂತೆ ಬೆಂಗಳೂರು ಸೆಂಟ್ರಲ್ ಡಿಸಿಪಿ ಹೆಚ್.ಟಿ. ಶೇಖರ್, ಎಸಿಪಿ, ಸ್ಟೇಡಿಯಂ ಇನ್ ಚಾರ್ಜ್ ಎಸಿಪಿ, ಕಬ್ಬನ್ ಪಾರ್ಕ್ ಠಾಣೆ ಇನ್ಸ್ ಪೆಕ್ಟರ್ ಎ.ಕೆ. ಗಿರೀಶ್ ಮತ್ತು ಠಾಣೆ ಸಿಬ್ಬಂದಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ.

ಇದರ ಬೆನ್ನಲ್ಲೇ ಬೆಂಗಳೂರು ನಗರ ಕಮಿಷನರ್ ಆಗಿ ಸೀಮಂತ್ ಕುಮಾರ್ ಸಿಂಗ್ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
- Advertisement -