Tuesday, May 21, 2024
Homeಕರಾವಳಿಪುತ್ತೂರಿನ ಹಿರಿಯ ಪತ್ರಕರ್ತ ಬಿ.ಟಿ.ರಂಜನ್ ಇನ್ನಿಲ್ಲ

ಪುತ್ತೂರಿನ ಹಿರಿಯ ಪತ್ರಕರ್ತ ಬಿ.ಟಿ.ರಂಜನ್ ಇನ್ನಿಲ್ಲ

spot_img
- Advertisement -
- Advertisement -

ಇಂದು ಪುತ್ತೂರಿನ ಹಿರಿಯ ಪತ್ರಕರ್ತ ಬಿ.ಟಿ.ರಂಜನ್ ಬೆಳಿಗ್ಗೆ ನಿಧನರಾಗಿದ್ದಾರೆ. ಉಪ್ಪಿನಂಗಡಿ ರಥಬೀದಿ ನಿವಾಸಿ ಬಿ.ಟಿ.ರಂಜನ್ ಅವರು ಮುಂಗಾರು , ಹೊಸದಿಗಂತ , ಉದಯವಾಣಿ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ್ದು ಪ್ರಸ್ತುತ ಹೊಸದಿಗಂತದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು .

ಕಳೆದ ಎರಡು – ಮೂರು ದಿನಗಳಿಂದ ಶೀತ ಹಾಗೂ ಕೆಮ್ಮಿನಿಂದ ಬಳಲುತ್ತಿದ್ದ ರಂಜನ್ ಅವರಿಗೆ ನಿನ್ನೆ ಬೆಳಿಗ್ಗೆಯಿಂದ ಜ್ವರವು ಕಾಣಿಸಿಕೊಂಡು ಆರೋಗ್ಯದಲ್ಲಿ ವಿಪರೀತ ಏರುಪೇರು ಕಾಣಿಸಿತ್ತು . ಈ ಹಿನ್ನಲೆಯಲ್ಲಿ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು . ಆದರೇ ಮಧ್ಯಾಹ್ನದ ವೇಳೆ ಆರೋಗ್ಯ ಇನ್ನಷ್ಟು ಹದಗೆಟ್ಟ ಹಿನ್ನಲೆಯಲ್ಲಿ ಅಂಬ್ಯುಲೆನ್ಸ್ ಸಹಾಯದಿಂದ ಮಂಗಳೂರಿನ ಕೆ ಎಂ ಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು . ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಿಗ್ಗೆ 5 ಗಂಟೆ ಸುಮಾರಿಗೆ ನಿಧನ ಹೊಂದಿದ್ದಾರೆ.

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿದ್ದ ರಂಜನ್ ಅವರು ಪತ್ನಿ ಗೀತಾ ಶೆಣೈ ಮತ್ತು ಪುತ್ರಿ ಸೌಮ್ಯ ಶೆಣೈಯವರನ್ನು ಅಗಲಿದ್ದಾರೆ .

3 ದಶಕಕ್ಕೂ ಅಧಿಕ ಕಾಲದಿಂದ ಪತ್ರಿಕಾ ರಂಗದಲ್ಲಿ ಕೆಲಸ ಮಾಡುತ್ತಿದ್ದ ರಂಜನ್ ರವರು ಪತ್ರಿಕಾ ರಂಗದಲ್ಲಿ ಅಚ್ಚಳಿಯದ ಛಾಪು ಮೂಡಿಸಿದ ಪುತ್ತೂರಿನ ಅಗ್ರಗಣ್ಯ ಪತ್ರಕರ್ತ . ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸಹಿತ ಹತ್ತು ಹಲವು ಪುರಸ್ಕಾರ , ಪ್ರಶಸ್ತಿ ಸನ್ಮಾನಗಳು ಲಭಿಸಿವೆ.

ರಂಜನ್’ರವರ ಕ್ರೈಂ ವರದಿಗಾರಿಕೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಕೊಲೆ , ದರೋಡೆ , ಕಳ್ಳತನ ಇತ್ಯಾದಿ ಪ್ರಕರಣಗಳಾದಾಗ ಅದರಲ್ಲಿನ ನಿಗೂಢತೆಯನ್ನು ತನ್ನ ಒಳನೋಟದ ಮೂಲಕ ಗ್ರಹಿಸಿ , ಅದನ್ನು ಅಷ್ಟೇ ರೋಚಕವಾಗಿ ಓದುಗರಿಗೆ ಉಣಬಡಿಸುವ ಕಲೆ ಅವರಿಗೆ ಕರಗತವಾಗಿದೆ . ಅವರ ವರದಿ ತನಿಖಾಧಿಕಾರಿಗೂ ಪ್ರಕರಣ ಭೇದಿಸಲು ಸಹಾಯವಾಗುತ್ತೆ.

- Advertisement -
spot_img

Latest News

error: Content is protected !!