- Advertisement -
- Advertisement -
ಪುತ್ತೂರು : ಸುದ್ದಿ ಬಿಡುಗಡೆಯ ಹಿರಿಯ ವರದಿಗಾರ ನಾರಾಯಣ ನಾಯ್ಕ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 48 ವರ್ಷ ವಯಸ್ಸಾಗಿತ್ತು. ಪುತ್ತೂರಿನ ಕುರಿಯ ಗ್ರಾಮದ ಅಮ್ಮುಂಜೆ ನಿವಾಸಿಯಾಗಿದ್ದಾರೆ ನಾರಾಯಣ ನಾಯ್ಕ್.
ನಿನ್ನೆ ರಾತ್ರಿ ನಾರಾಯಣ್ ನಾಯ್ಕ್ ಅವರಿಗೆ ಮನೆಯಲ್ಲಿರುವಾಗ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಮೊದಲು ಧನ್ವಂತರಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಅಲ್ಲಿಂದ ಮಂಗಳೂರಿನ ಕೆ.ಎಸ್. ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೇ ಅವರು ನಿನ್ನೆ ರಾತ್ರಿಯೇ ನಿಧನರಾಗಿದ್ದಾರೆ.
- Advertisement -