Tuesday, April 23, 2024
Homeತಾಜಾ ಸುದ್ದಿಪಿಎಸ್ಐ ಹಗರಣದಲ್ಲಿ ಹಿರಿಯ ಪೊಲೀಸ್ ಅಧಿಕಾರಿಯ ಬಂಧನ: ಸರ್ಕಾರಕ್ಕೆ ಮುಜುಗರವಾಗಿಲ್ಲ ಎಂದ ಸಿಎಂ

ಪಿಎಸ್ಐ ಹಗರಣದಲ್ಲಿ ಹಿರಿಯ ಪೊಲೀಸ್ ಅಧಿಕಾರಿಯ ಬಂಧನ: ಸರ್ಕಾರಕ್ಕೆ ಮುಜುಗರವಾಗಿಲ್ಲ ಎಂದ ಸಿಎಂ

spot_img
- Advertisement -
- Advertisement -

ಬೆಂಗಳೂರು: ಇಡೀ ವ್ಯವಸ್ಥೆ ಸ್ವಚ್ಛಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಕೈ ಹಾಕಿದೆ. ಆ ಹಿನ್ನೆಲೆಯಲ್ಲಿ ಪಿಎಸ್ ಐ ಹಗರಣದಲ್ಲಿ ಹಿರಿಯ ಪೊಲೀಸ್ ಅಧಿಕಾರಿಯ ಬಂಧನವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಕಬ್ಬನ್ ಪಾರ್ಕ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅಮೃತ್ ಪೌಲ್ ಬಂಧನದಿಂದ ಸರ್ಕಾರಕ್ಕೆ ಮುಜುಗರ ಆಗಿಲ್ಲ. ತಪ್ಪಿತಸ್ಥರನ್ನು ಬಂಧಿಸುವುದಾಗಿ ಹೇಳಿದ್ದೆ. ಆ ಕೆಲಸವನ್ನು ಸರ್ಕಾರ ಮಾಡಿದೆ ಎಂದರು.

ನಮ್ಮ ಸರ್ಕಾರ ಅಲ್ಲದೇ ಬೇರೆ ಯಾವುದೇ ಸರ್ಕಾರ ಈ ಕೆಲಸ ಮಾಡುತ್ತಿರಲಿಲ್ಲ. ನಾವು ಮಾಡಿದ್ದೇವೆ. ಈ ಸಂಬಂಧ ಸಾಕ್ಷಿಗಳನ್ನು ಕಲೆಹಾಕಲಾಗುತ್ತದೆ ಎಂದು ಹೇಳಿದರು.

545 ಪಿಎಸ್ ಐ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆಸಿದ ಆರೋಪದಡಿ ಎಡಿಜಿಪಿ ಅಮೃತ್ ಪೌಲ್ ಅವರನ್ನು ಸಿಐಡಿ ಪೊಲೀಸರು ಸೋಮವಾರ ಬಂಧಿಸಿ 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದ್ದಾರೆ.

- Advertisement -
spot_img

Latest News

error: Content is protected !!