Sunday, May 5, 2024
Homeತಾಜಾ ಸುದ್ದಿಸೆಪ್ಟಂಬರ್ 29 ರಂದು ಕರ್ನಾಟಕ ಬಂದ್ ಗೆ ಕರೆ ಕೊಟ್ಟ ವಾಟಾಳ್ ನಾಗರಾಜ್

ಸೆಪ್ಟಂಬರ್ 29 ರಂದು ಕರ್ನಾಟಕ ಬಂದ್ ಗೆ ಕರೆ ಕೊಟ್ಟ ವಾಟಾಳ್ ನಾಗರಾಜ್

spot_img
- Advertisement -
- Advertisement -

ಬೆಂಗಳೂರು; ತಮಿಳುನಾಡಿಗೆ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿರೋದು ರಾಜ್ಯದ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಸುಪ್ರೀಂ ಆದೇಶದ ಬೆನ್ನಲ್ಲೇ ಬಂದ್, ಪ್ರತಿಭಟನೆಗಳು ಜೋರಾಗಿವೆ, ಸಿನಿಮಾ ತಾರೆಯರೂ ಕೂಡ ಈ ಬಗ್ಗೆ ಧ್ವನಿ ಎತ್ತಿದ್ದಾರೆ. ಹೀಗಿರುವಾಗಲೇ ಇಂದು ಸೆಪ್ಟೆಂಬರ್ 29ರಂದು ಅಖಂಡ ಕರ್ನಾಟಕ ಬಂದ್​ಗೆ ವಾಟಾಳ್ ನಾಗರಾಜ್ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಮುಖಂಡರ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ನಡೆದ ವಿವಿಧ ಸಂಘಟನೆಗಳ ಮುಖಂಡರ ಸಭೆಯಲ್ಲಿ ಶುಕ್ರವಾರ ಕರ್ನಾಟಕ ಬಂದ್​ಗೆ ತೀರ್ಮಾನಿಸಲಾಗಿದೆ. ಈ ಬಗ್ಗೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಅಧಿಕೃತ ಘೋಷಣೆ ಮಾಡಿದ್ದು, ಕರ್ನಾಟಕದ ಎಲ್ಲ ನೀರಾವರಿ ಯೋಜನೆಗಳಿಗೆ ಆಗ್ರಹಿಸಿ ಸೆ.29ರಂದು ಕರ್ನಾಟಕ ಬಂದ್​ಗೆ ಕರೆ ನೀಡಲಾಗಿದ್ದು, ಎಲ್ಲರು ಸಹಕಾರ ನೀಡಬೇಕೆಂದು ಮನವಿ ಮಾಡಿಕೊಂಡರು.

ಕಾವೇರಿ ನದಿ ನೀರು ಹಂಚಿಕೆ ವಿವಾದ, ಮಹದಾಯಿ ಯೋಜನೆ, ಕೃಷ್ಣಾನದಿ ಯೋಜನೆ ಸೇರಿದಂತೆ ಎಲ್ಲ ಯೋಜನೆಗಳ ವಿಚಾರವಾಗಿ ಸೆ.29ರ ಕರ್ನಾಟಕ ಬಂದ್​ಗೆ ಎಲ್ಲರೂ ಸಹಕಾರ ನೀಡಬೇಕು. ಅಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಆಯೋಜನೆ ಮಾಡಲಾಗುತ್ತದೆ. ಟೌನ್​ಹಾಲ್​ನಿಂದ ಫ್ರೀಡಂಪಾರ್ಕ್​ವರೆಗೂ ಪ್ರತಿಭಟನಾ ರ್ಯಾಲಿ ನಡೆಸುತ್ತೇವೆ ಎಂದು ವಿವರಿಸಿದರು.ಇನ್ನು ಕರ್ನಾಟಕ ಬಂದ್​ಗೆ ಓಲಾ ಊಬರ್ ಚಾಲಕರು ಮತ್ತು ಮಾಲೀಕರ ಸಂಘದ ಅಧ್ಯಕ್ಷ ತನ್ವೀರ್ ಪಾಷಾ ಅವರು ಬೆಂಬಲವನ್ನು ಘೋಷಿಸಿದ್ದಾರೆ. ಇನ್ನು ಇದಕ್ಕೆ ಕನ್ನಡಪರ ಸಂಘಟನೆಗಳು ಸಹ ಬೆಂಗಳೂರು ಬಂದ್ ಬದಲಾಗಿ ಕರ್ನಾಟಕ ಬಂದ್​ಗೆ ಬೆಂಬಲ ನೀಡಿವೆ.

- Advertisement -
spot_img

Latest News

error: Content is protected !!