ಸುರತ್ಕಲ್: ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿ ಟ್ರಕ್ ಚಾಲನೆ ಮಾಡಿ ಕಾರು, ಬೈಕ್ ಹಾಗೂ ರಿಕ್ಷಾಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿರುವ ಘಟನೆ ಸುರತ್ಕಲ್ ನಲ್ಲಿ ನಡೆದಿದೆ.
ಪಣಂಬೂರು ಕಡೆಯಿಂದ ಎಂಆರ್ಪಿಎಲ್ ಕಡೆಗೆ ಹೋಗುತ್ತಿದ್ದ 16 ಚಕ್ರಗಳ ಟ್ರಕ್ಅನ್ನು ಅದರ ಚಾಲಕ ಕುಡಿದ ಮತ್ತಿನಲ್ಲಿ ಅತೀವೇಗವಾಗಿ ಯದ್ವಾತದ್ವ ಚಲಾಯಿಸಿಕೊಂಡು ಬಂದು ಕಾರು, ಬೈಕ್ ಹಾಗೂ ರಿಕ್ಷಾ ವೊಂದಕ್ಕೆ ಢಿಕ್ಕಿ ಹೊಡೆದು ಪರಾರಿಯಾಗಿದ್ದ.ಸುರತ್ಕಲ್ ಸಮೀಪದ ಕಾನ ಬಳಿ ಪೊಲೀಸರು ಹಾಗೂ ಸಾರ್ವಜನಿಕರು ಬೆನ್ನಟ್ಟಿ ಲಾರಿಯನ್ನು ಪತ್ತೆ ಹಚ್ಚಿ ಚಾಲಕನನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಸುರತ್ಕಲ್ ಜಂಕ್ಷನ್ನಲ್ಲಿ ದ್ವಿಚಕ್ರ ಸವಾರನಿಗೆ ಢಿಕ್ಕಿ ಹೊಡೆದು ಬಳಿಕ ಪೊಲೀಸ್ ಪಟ್ರೋಲ್ ವಾಹನಕ್ಕೆ ಗುದ್ದಿದ್ದಾನೆ. ಈ ವೇಳೆ ಲಾರಿ ನಿಲ್ಲಿಸದೆ ಕಾನದತ್ತ ಎಸ್ಕೇಪ್ ಆಗುತ್ತಿದ್ದಾಗ ಸುರತ್ಕಲ್ ರೈಲ್ವೇ ಬ್ರಿಡ್ಜ್ ಬಳಿ ರಿಕ್ಷಾಕ್ಕೆ ಢಿಕ್ಕಿ ಹೊಡೆಸಿದ್ದಾನೆ ಪರಿಣಾಮ ರಿಕ್ಷಾ ಪಲ್ಟಿಯಾಗಿ ಮೂವರಿಗೆ ಗಾಯವಾಗಿತ್ತು. ಇದಕ್ಕೂ ಮುನ್ನ ಬೈಕಂಪಾಡಿ ಹಾಗೂ ಸುರತ್ಕಲ್ ಬಸ್ ನಿಲ್ದಾಣದ ಬಳಿ ಕಾರಿಗೆ ಢಿಕ್ಕಿ ಹೊಡೆದಿದ್ದ. ಈ ಬಗ್ಗೆ ಪ್ರಕರಣ ದಾಖಲಾಗಿದೆ.