Saturday, June 6, 2026
Homeಕರಾವಳಿಉಡುಪಿಉಡುಪಿ: ಸ್ಕಾರ್ಫಿಯೋ ಚಾಲಕನ ನಿರ್ಲಕ್ಷ್ಯದಿಂದ ಸರಣಿ ಅಪಘಾತ

ಉಡುಪಿ: ಸ್ಕಾರ್ಫಿಯೋ ಚಾಲಕನ ನಿರ್ಲಕ್ಷ್ಯದಿಂದ ಸರಣಿ ಅಪಘಾತ

- Advertisement -
- Advertisement -

ಉಡುಪಿ: ಸ್ಕಾರ್ಫಿಯೋ ಚಾಲಕನ ಅತೀ ವೇಗ ಹಾಗೂ ನಿರ್ಲಕ್ಷತೆಯ ಚಾಲನೆಯಿಂದ ಸರಣಿ ಅಪಘಾತವಾದ ಘಟನೆ ಗುರುವಾರ ರಾತ್ರಿ ಉಚ್ಚಿಲ ರಾ. ಹೆದ್ದಾರಿ 66ರ ಮಸೀದಿ ಎದುರು ನಡೆದಿದೆ.

ಮಂಗಳೂರಿನಿಂದ ಉಡುಪಿ ಕಡೆ ಸಾಗುತ್ತಿದ್ದ ಸ್ಕಾರ್ಫಿಯೋ ಕಾರು ಚಾಲಕ ಎರ್ಮಾಳು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಎರಡು ಬೈಕ್ ಗಳಿಗೆ ಢಿಕ್ಕಿ ಹೊಡೆದಿದ್ದು, ಅಲ್ಲಿ ನಿಲ್ಲಿಸದೆ ಅತಿವೇಗದಿಂದ ಬಂದು ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66ರ ಮಸೀದಿಯ ಎದುರು ಕಾರು, ಬೈಕು ಹಾಗೂ ಮೀನಿನ ಲಾರಿಗೆ ಢಿಕ್ಕಿ ಹೊಡೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಕಾರ್ಫಿಯೋ ಢಿಕ್ಕಿ ಹೊಡೆದ ಪರಿಣಾಮ ಕಾರು ವಿಭಜಕ ಏರಿ ಇನ್ನೊಂದು ಪಥದತ್ತ ತಿರುಗಿ ನಿಂತಿದೆ. ಸ್ಕೂಟಿ ಸವಾರ ಹಾಗೂ ಕಾರು ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಪಡುಬಿದ್ರೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಈ ಬಗ್ಗೆ ಪಡುಬಿದ್ರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!