ಬಂಟ್ವಾಳ: ಬಿ ಸಿ ರೋಡ್ ನ ಬಿಜೆಪಿ ಪಕ್ಷದ ಕಚೇರಿಯಲ್ಲಿ 75 ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವವನ್ನು ಆಚರಿಸಲಾಯಿತು.

ಕ್ಷೇತ್ರದ ಅಧ್ಯಕ್ಷರಾದ ದೇವಪ್ಪ ಪೂಜಾರಿ ಅವರು ಧ್ವಜಾರೋಹಣ ಮಾಡಿ ಮಾತನಾಡಿದರು. ಕ್ಷೇತ್ರದ ಗೌರವಾನ್ವಿತ ಶಾಸಕರಾದ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು,ಬೂಡಾ ಅಧ್ಯಕ್ಷರಾದ ದೇವದಾಸ್ ಶೆಟ್ಟಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರಾಮದಾಸ್ ಬಂಟ್ವಾಳ ಸ್ವಾತಂತ್ರ್ಯ ದಿನಾಚರಣೆ ಮಹತ್ವ ತಿಳಿಸಿದರು.
ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮೋನಪ್ಪ ದೇವಸ್ಯ , ಶ್ರೀಮತಿ ಸುಲೋಚನಾ ಜಿ ಕೆ ಭಟ್ ಮಂಡಲ ಉಪಾಧ್ಯಕ್ಷ ರೊನಾಲ್ಡ್ ಡಿಸೋಜ ,ಮಂಡಲ ಕಾರ್ಯದರ್ಶಿ ರಮಾನಾಥ ರಾಯಿ, ಗಣೇಶ್ ರೈ ಮಾಣಿ, ಪುರುಷೋತ್ತಮ ಶೆಟ್ಟಿ ,ಯಶೋಧರ ಕರ್ಬೆಟ್ಟು, ಗಣೇಶ್ ದಾಸ್, ಪ್ರದೀಪ್ ಅಜ್ಜಿಬೆಟ್ಟು, ಬಾಸ್ಕರ ಟೈಲರ್, ಕೇಶವ ದೈಪಲ, ಮಹೇಶ್ ಶೆಟ್ಟಿ, ಮೋಹನ್ ಪಿ ಎಸ್, ಸಚಿನ್ ಮೆಲ್ಕಾರ್ ಮುಂತಾದ ಪ್ರಮುಖರು ಉಪಸ್ಥಿತರಿದ್ದರು.ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ರವೀಶ್ ಶೆಟ್ಟಿ ಕಾರ್ಕಳ ಸ್ವಾಗತಿಸಿದರು ಪುರುಷೋತ್ತಮ ಶೆಟ್ಟಿ ವಂದಿಸಿದರು