Sunday, May 19, 2024
Homeಅಪರಾಧಧರ್ಮಸ್ಥಳ: ಅನ್ಯಧರ್ಮೀಯ ಯುವಕನಿಂದ ಬಾಲಕಿಗೆ ಲೈಂಗಿಕ ಕಿರುಕುಳ; ಆರೋಪಿ ರಿಕ್ಷಾ ಚಾಲಕನ ವಿರುದ್ಧ ಪ್ರಕರಣ ದಾಖಲು!

ಧರ್ಮಸ್ಥಳ: ಅನ್ಯಧರ್ಮೀಯ ಯುವಕನಿಂದ ಬಾಲಕಿಗೆ ಲೈಂಗಿಕ ಕಿರುಕುಳ; ಆರೋಪಿ ರಿಕ್ಷಾ ಚಾಲಕನ ವಿರುದ್ಧ ಪ್ರಕರಣ ದಾಖಲು!

spot_img
- Advertisement -
- Advertisement -

ನೆಲ್ಯಾಡಿ: ಅನ್ಯಧರ್ಮೀಯ ಯುವಕನೋರ್ವ ಅಪ್ರಾಪ್ತ ಬಾಲಕಿಗೆ ಒಪ್ಪಿಗೆ ಇಲ್ಲದೆ ಬೆದರಿಸಿ ಪದೇ ಪದೇ ಲೈಂಗಿಕ ಸಂಪರ್ಕ ಮಾಡಿರುವ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೆಲ್ಯಾಡಿಯಲ್ಲಿ ರಿಕ್ಷಾ ಚಾಲಕನಾಗಿರುವ ಹೊಸಮಜಲು ನಿವಾಸಿ ನೌಫಲ್ ಪ್ರಕರಣದ ಆರೋಪಿಯಾಗಿದ್ದಾನೆ. ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ನಿವಾಸಿಯಾಗಿರುವ ಅಪ್ರಾಪ್ತಯೋರ್ವರು ನೀಡಿರುವ ದೂರಿನ ಮೇರೆಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೆಲ್ಯಾಡಿಯಲ್ಲಿ ಮೂರು ವರ್ಷದ ಹಿಂದೆ ಈಕೆ ಖಾಸಗಿ ವಿದ್ಯಾಸಂಸ್ಥೆಯೊಂದರ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಸಂದರ್ಭದಲ್ಲಿ ಆರೋಪಿ ನೌಫಲ್ ಆಕೆಯ ಪರಿಚಯ ಮಾಡಿಕೊಂಡಿದ್ದ.ಆಕೆಯ ಮೊಬೈಲ್ ನಂಬರ್ ಪಡೆದುಕೊಂಡು ಪದೇ ಪದೇ ಕರೆ ಮಾಡಿ ಮಾತನಾಡುತ್ತಿದ್ದ. ಆರೋಪಿಯು 2018 ರ ಫೆಬ್ರವರಿ 15 ರಂದು ಬಾಲಕಿಯ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಆಕೆಯ ಮೈಮೇಲೆ ಕೈ ಹಾಕಿ ಬಲವಂತವಾಗಿ ಲೈಂಗಿಕ ಸಂಪರ್ಕ ಮಾಡಿದ್ದಾನೆ. ಇದೆ ವೇಳೆ ಆಕೆಯ ಬೆತ್ತಲೆ ಫೋಟೋಗಳನ್ನು ತೆಗೆದು ನೀನು ಈ ವಿಚಾರವನ್ನು ಯಾರಿಗಾದರೂ ಹೇಳಿದರೆ ನಿನ್ನ ಬೆತ್ತಲೆ ಫೋಟೋಗಳನ್ನು ಸ್ನೇಹಿತರೆಲ್ಲರಿಗೂ ಕಳುಹಿಸುತ್ತೇನೆ ಎಂದು ಬೆದರಿಸಿದ್ದಾನೆ. ಇದಾದ ನಂತರ ಆರೋಪಿಯು 2021 ರ ಸೆಪ್ಟೆಂಬರ್ 25 ರಂದು ಬಾಲಕಿಯ ಮನೆಯಲ್ಲಿ ಯಾರು ಇಲ್ಲದ ವಿಚಾರವನ್ನು ತಿಳಿದುಕೊಂಡು ಆಟೋ ರಿಕ್ಷಾದಲ್ಲಿ ಮನೆಗೆ ತೆರಳಿ ಬಾಲಕಿಯ ಒಪ್ಪಿಗೆ ಇಲ್ಲದೇ ಲೈಂಗಿಕ ಸಂಪರ್ಕ ಮಾಡಿದ್ದಾನೆ.

ವಿದ್ಯಾರ್ಥಿನಿ 2020 ರಲ್ಲಿ ಹೆಚ್ಚಿನ ವಿದ್ಯಾಭ್ಯಾಸಕ್ಕೆ ಮಂಗಳೂರಿನ ಕಾಲೇಜೊಂದಕ್ಕೆ ತೆರಳಿದ್ದು ಅಲ್ಲಿ ಸಂಬಂಧಿಕರ ಮನೆಯಲ್ಲಿ ಉಳಿದುಕೊಳ್ಳುತ್ತಿದ್ದಳು. ಈ ವಿಚಾರವನ್ನು ತಿಳಿದುಕೊಂಡಿದ್ದ ಆರೋಪಿಯು ಆಕೆಗೆ ಕರೆ ಮಾಡಿ ಸಿಗುವಂತೆ ಒತ್ತಾಯಿಸಿದ್ದಲ್ಲದೆ, ಆಕೆ ನಿರಾಕರಿಸಿದಾಗ ಬೆತ್ತಲೆ ಚಿತ್ರಗಳನ್ನು ಎಲ್ಲರಿಗೂ ತೋರಿಸುವುದಾಗಿ ಬೆದರಿಕೆಯೊಡ್ಡಿದ್ದ. 20-02-2021ರ ಬೆಳಿಗ್ಗೆ ಆರೋಪಿಯು ಕಾರಿನಲ್ಲಿ ಮಂಗಳೂರಿಗೆ ಬಂದು ಮಾಲ್‌ಗೆ ಕರೆದುಕೊಂಡು ಹೋಗುವುದಾಗಿ ತಿಳಿಸಿ ಅಲ್ಲಿಗೇ ಹೋಗದೇ ಸುರತ್ಕಲ್‌ನ ವಸತಿಗೃಹವೊಂದಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾನೆ.

ನ.2ರಂದು ಬೆಳಿಗ್ಗೆ ನೌಫಲ್ ಮತ್ತೆ ಕರೆ ಮಾಡಿ ಲೈಂಗಿಕ ಸಂಪರ್ಕಕ್ಕೆ ಒತ್ತಾಯಿಸಿದ್ದು ಇದರಿಂದ ಬೇಸತ್ತು ಬಾಲಕಿ ಈ ವಿಚಾರವನ್ನು ತಂದೆ ತಾಯಿಗೆ ತಿಳಿಸಿದ್ದಾಳೆ. ಆರೋಪಿಯು ಒಪ್ಪಿಗೆ ಇಲ್ಲದೆ ಬೆದರಿಸಿ ಪದೇ ಪದೇ ಲೈಂಗಿಕ ಸಂಪರ್ಕ ಮಾಡಿರುತ್ತಾನೆ ಎಂದು ಆರೋಪಿಸಿ ನ.2ರಂದು ಬಾಲಕಿ ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೊಲೀಸರು ಆರೋಪಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

- Advertisement -
spot_img

Latest News

error: Content is protected !!