Sunday, June 29, 2025
Homeಅಪರಾಧಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ...! ನಾಪತ್ತೆಯಾಗಿರುವ ವಕೀಲ ರಾಜೇಶ್ ಮನೆಯಲ್ಲಿ ಪೊಲೀಸರಿಂದ ಶೋಧ...!

ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ…! ನಾಪತ್ತೆಯಾಗಿರುವ ವಕೀಲ ರಾಜೇಶ್ ಮನೆಯಲ್ಲಿ ಪೊಲೀಸರಿಂದ ಶೋಧ…!

spot_img
- Advertisement -
- Advertisement -

ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಡಿ ತಲೆಮರೆಸಿಕೊಂಡಿರುವ ಆರೋಪಿ ವಕೀಲ ಕೆ.ಎಸ್.ಎನ್ ರಾಜೇಶ್ ಭಟ್ ಅವರ ಮನೆಗೆ ಇಂದು ಪೊಲೀಸರು ಭೇಟಿ ನೀಡಿ ಶೋಧ ನಡೆಸಿದ್ದಾರೆ.

ಪ್ರಕರಣದ ತನಿಖಾಧಿಕಾರಿ ಎಸಿಪಿ ರಂಜಿತ್ ಬಂಡಾರು ಅವರ ನೇತೃತ್ವದ ಪೊಲೀಸರ ತಂಡ ಬಿಜೈನ ಮನೆಯಲ್ಲಿ ಶೋಧ ನಡೆಸಿದೆ. ತನಿಖೆಗೆ ಅಗತ್ಯವಾದ ದಾಖಲೆಗಳಿಗಾಗಿ ಶೋಧ ನಡೆಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳೂರಿನ ಖ್ಯಾತ ವಕೀಲರಾಗಿದ್ದ ರಾಜೇಶ್ ಭಟ್ ಅವರು ತಮ್ಮ ಕಚೇರಿಯಲ್ಲಿ ಇಂಟರ್ನ್‌ಶಿಪ್‌ಗೆ ಬಂದ ಕಾನೂನು ಕಾಲೇಜಿನ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪ್ರಕರಣ ದಾಖಲಾಗಿತ್ತು. ತನ್ನ ವಿರುದ್ದ ಪ್ರಕರಣ ದಾಖಲಾಗುತ್ತಿದ್ದಂತೆ ರಾಜೇಶ್ ಭಟ್ ಪರಾರಿಯಾಗಿದ್ದಾರೆ.

ಆರೋಪಿ ಭಟ್‌ಗಾಗಿ ಶೋಧ ನಡೆಸುತ್ತಿರುವ ಪೊಲೀಸರು ಆತ ವಿದೇಶಕ್ಕೆ ಹೋಗದಂತೆ ತಡೆಯಲು ಲುಕ್ ಔಟ್ ನೋಟಿಸ್ ಕೂಡ ಜಾರಿ ಮಾಡಿದ್ದಾರೆ. ಇದೀಗ ರಾಜೇಶ್ ಭಟ್ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕಲು ಮನೆ ಶೋಧ ನಡೆಸಿದ್ದಾರೆ.

- Advertisement -
spot_img

Latest News

error: Content is protected !!