ಉಪ್ಪಿನಂಗಡಿ:ಯುವಕನೊಬ್ಬ ಅಪ್ರಾಪ್ತೆಯನ್ನು ಬಲವಂತವಾಗಿ ಲಾಡ್ಜ್ ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ ಘಟನೆ ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ ಕಲ್ಲೇರಿ ಎಂಬಲ್ಲಿ ನಡೆದಿದೆ.
ಮುನಾಸೀರ್ ಎಂಬ ಯುವಕ ಸಂತ್ರಸ್ತ ಬಾಲಕಿಗೆ ಪರಿಚಯದವನಾಗಿದ್ದು, ಆಗಾಗ್ಗೆ ಮನೆಗೆ ಬರುತ್ತಿದ್ದ.ಅಲ್ಲದೇ ಆಕೆಯನ್ನು ಪ್ರೀತಿಸುವಂತೆ ಪೀಡಿಸುತ್ತಿದ್ದ ಎನ್ನಲಾಗಿದೆ. ಮೇ.30 ರಂದು ಬಾಲಕಿ ಮನೆಯಿಂದ ಶಾಲೆಗೆ ಹೋಗುವಾಗ ಕಾರಿನಲ್ಲಿ ಶಾಲೆಗೆ ಬಿಡುತ್ತೇನೆ ಬಾ ಎಂದು ಕೈ ಹಿಡಿದು ಕರೆದುಕೊಂಡು ಹೋಗಿ ಶಾಲೆಗೆ ಬಿಡದೇ ಉಪ್ಪಿನಂಗಡಿ ಲಾಡ್ಜ್ ಗೆ ಬಾಲಕಿಯನ್ನು ಕರೆದುಕೊಂಡು ಹೋಗಿ ಬಲವಂತವಾಗಿ ಅತ್ಯಾಚಾರ ನಡೆಸಿದ್ದಾನೆ.ಇದಲ್ಲದೆ ನಿನ್ನೆ (07-06-2022) ಕೂಡ ಬೆಳಿಗ್ಗೆ ಬಾಲಕಿ ಶಾಲೆಗೆ ಹೋಗುತ್ತಿದ್ದ ವೇಳೆ ಬಲಾತ್ಕಾರವಾಗಿ ಬಾಲಕಿಯನ್ನು ಕಾರಿನಲ್ಲಿ ಕರೆದುಕೊಂಡು ಹೋಗಿ ಮತ್ತೆ ಬಲವಂತವಾಗಿ ಅತ್ಯಾಚಾರವೆಸಗಿದ್ದಾನೆ. ಈ ವಿಷಯವನ್ನು ಯಾರಿಗಾದರೂ ಹೇಳಿದರೆ ನಿನ್ನನ್ನು ಸಾಯಿಸುತ್ತೇವೆ ಎಂದು ಜೀವ ಬೆದರಿಕೆ ಹಾಕಿದ್ದಾನೆ.
ಬಳಿಕ ಲಾಡ್ಜ್ ನಿಂದ ಕರೆದುಕೊಂಡು ಬಂದು ಉಪ್ಪಿನಂಗಡಿ ಬಸ್ ನಿಲ್ದಾಣದ ಬಳಿ ಬಿಟ್ಟು ಹೋಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.