- Advertisement -
- Advertisement -
ಮಂಗಳೂರು :ನಾಗುರಿಯಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಶಂಕಿತ ಉಗ್ರ ಶಾರಿಕ್ ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಕುಕ್ಕರ್ ಬಾಂಬ್ ಸ್ಪೋಟದಲ್ಲಿ ಗಾಯಗೊಂಡಿರುವ ಶಂಕಿತ ಉಗ್ರ ಶಾರಿಕ್ ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಹಂತ ಹಂತವಾಗಿ ಶಾರಿಕ್ ಚೇತರಿಸಿಕೊಳ್ಳುತ್ತಿದ್ದಾನೆ. ವೈದ್ಯರ ನೀಡುತ್ತಿರುವ ಚಿಕಿತ್ಸೆಗೆ ಶಾರಿಕ್ ಸ್ಪಂದಿಸುತ್ತಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.
ಶಂಕಿತ ಉಗ್ರ ಶಾರಿಕ್ ಹೊಗೆ ತುಂಬಿಕೊಂಡು ಚೆಸ್ಟ್ ಇನ್ಫೆಕ್ಷನ್ ನಿಂದ ಬಳಲುತ್ತಿದ್ದಾನೆ. ಸದ್ಯ ಚೇತರಿಸಿಕೊಳ್ಳುತ್ತಿರುವ ಶಾರಿಕ್ ವೈದ್ಯರ ಜೊತೆಗೆ ಮಾತನಾಡಲು ಒಪ್ಪುತ್ತಿಲ್ಲ. ಪೊಲೀಸ್ ಬಿಗಿ ಭದ್ರತೆಯಲ್ಲಿ ಶಾರಿಕ್ ಗೆ ಚಿಕಿತ್ಸೆ ನಡೆಯುತ್ತಿದೆ.
- Advertisement -