- Advertisement -
- Advertisement -
ಮಂಗಳೂರು; ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಶಾರೀಕ್ ಆರೋಗ್ಯದಲ್ಲಿ ಸುಧಾರಣೆಯಾಗಿದ್ದು ಆತ ಮುಂದಿನ ವಾರ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಉಗ್ರ ಶಾರೀಕ್ ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, 25 ರಷ್ಟು ಸುಟ್ಟ ಗಾಯಗಳಿಂದ ಗುಣಮುಖನಾಗಿದ್ದು, ಶಾರೀಕ್ ಡಿಸ್ಚಾರ್ಜ್ ಮಾಡಲು ವೈದ್ಯರು ಮುಂದಾಗಿದ್ದಾರೆ. ಮುಂದಿನ ವಾರವೇ ಡಿಸ್ಚಾರ್ಜ್ ಮಾಡಲು ವೈದ್ಯರು ನಿರ್ಧರಿಸಿದ್ದಾರೆ. ಬಹುತೇಕ ಸುಟ್ಟ ಗಾಯಗಳು ವಾಸಿಯಾಗಿ ಶಾರೀಕ್ ಆರೋಗ್ಯದಲ್ಲಿ ಸುಧಾರಣೆಯಾಗಿದೆ.
ವಿಕ್ಟೋರಿಯಾ ಆಸ್ಪತ್ರೆಯಿಂದ ಶಾರೀಕ್ ಡಿಸ್ಚಾರ್ಜ್ ಬಳಿಕ ಎನ್ ಐಎ ತಂಡ ಮತ್ತೆ ಕಸ್ಟಡಿಗೆ ಪಡೆಯಲಿದೆ.ಈಗಾಗಲೇ ಚಿಕಿತ್ಸೆ ಜೊತೆಗೆ ಬಹುತೇಕ ವಿಚಾರಣೆ ನಡೆಸಲಾಗಿದ್ದು,ಮಾಜ್ ಹಾಗೂ ಯಾಸೀನ್ ಜೊತೆಗಿನ ನಂಟಿನ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ ಎನ್ನಲಾಗಿದೆ.
- Advertisement -