- Advertisement -
- Advertisement -
ಬೆಂಗಳೂರು: ಬೆಂಗಳೂರಿಗೆ ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ರೂವಾರಿ ಶಾರೀಕ್ಗೆ ಮಂಗಳೂರಿನಲ್ಲಿ ಚಿಕಿತ್ಸೆ ಫಲಕಾರಿಯಾಗದ ಹಿನ್ನೆಲೆಯಲ್ಲಿ ನಾಳೆ (ಮಂಗಳವಾರ) ಬೆಂಗಳೂರಿನಲ್ಲಿ ಸರ್ಜರಿ ನಡೆಯಲಿದೆ.
ಸದ್ಯ ಶಾರೀಕ್ಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಾಳೆ ಪ್ಲಾಸ್ಟಿಕ್ ಸರ್ಜನ್ ಕೆ.ಟಿ ರಮೇಶ್ ನೇತೃತ್ವದಲ್ಲಿ ಚಿಕಿತ್ಸೆ ನೀಡಲು ಎನ್ಐಎ ಮುಂದಾಗಿದೆ. ಚಿಕಿತ್ಸೆ ನಡೆದು 7 ದಿನದ ಬಳಿಕ ಶಾರೀಕ್ ಡಿಸ್ಚಾರ್ಜ್ ಆಗುವ ಸಾಧ್ಯತೆಯಿದ್ದು, ನಂತರ ಹೆಚ್ಚಿನ ವಿಚಾರಣೆಯನ್ನು ಎನ್ಐಎ ತಂಡ ನಡೆಸಲಿದೆ.
- Advertisement -