Tuesday, May 14, 2024
Homeಕರಾವಳಿಮಂಗಳೂರು: ಶಿರಾಡಿ ರಸ್ತೆಯಲ್ಲಿ ಎಲ್ಲಾ ಬಗೆಯ ವಾಹನ ಸಂಚಾರಕ್ಕೆ ಅವಕಾಶ!

ಮಂಗಳೂರು: ಶಿರಾಡಿ ರಸ್ತೆಯಲ್ಲಿ ಎಲ್ಲಾ ಬಗೆಯ ವಾಹನ ಸಂಚಾರಕ್ಕೆ ಅವಕಾಶ!

spot_img
- Advertisement -
- Advertisement -

ಮಂಗಳೂರು : ಸುಮಾರು ಎರಡು ತಿಂಗಳ ಅಂತರದ ನಂತರ, ಬೆಂಗಳೂರು ಮತ್ತು ಮಂಗಳೂರು ನಡುವಿನ ರಾಷ್ಟ್ರೀಯ ಹೆದ್ದಾರಿ 75 ರ ಮೂಲಕ ಎಲ್ಲಾ ರೀತಿಯ ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ ಎಂದು ಹಾಸನ ಜಿಲ್ಲಾ ಉಪ ಆಯುಕ್ತ ಆರ್ ಗಿರೀಶ್ ಈ ಆದೇಶ ಹೊರಡಿಸಿದ್ದಾರೆ.

ಜುಲೈ 22 ರಂದು ದೋಣಿಗಲ್‌ ಬಳಿ ಭೂ ಕುಸಿತದ ಹಿನ್ನೆಲೆ ಭಾರಿ ವಾಹನಗಳ ಸಂಚಾರ ಜಿಲ್ಲಾಧಿಕಾರಿ ನಿಷೇಧಿಸಿದ್ದರು ಈಗ ರಸ್ತೆ ದುರಸ್ತಿಯಾಗಿದೆ. ವಾಹನ ಸಂಚಾರಕ್ಕೆ ಅನುಮತಿ ನೀಡಬಹುದೆಂದು ಎನ್‌ಎಚ್‌ಎಐ ಎಂಜಿನಿಯರುಗಳು ಶಿಫಾರಸು ಮಾಡಿದ್ದರು. ತುರ್ತು ಸಂದರ್ಭಗಳಲ್ಲಿ ಸ್ಪಂದಿಸುವ ನಿಟ್ಟಿನಲ್ಲಿ ಈ ರಸ್ತೆಯಲ್ಲಿ ಪೊಲೀಸ್‌ ಇಲಾಖೆಯ ವತಿಯಿಂದ ಸಿಬಂದಿಯನ್ನು ನಿಯೋಜಿಸಲು ಪೊಲೀಸ್‌ ಅಧೀಕ್ಷಕರಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

ದಕ್ಷಿಣಕನ್ನಡದ ಪ್ರಮುಖ ಸಂಪರ್ಕ ಕೊಂಡಿ ಶಿರಾಡಿ ಘಾಟ್‌ ಎಲ್ಲಾ ಬಗೆಯ ವಾಹನಗಳ ಸಂಚಾರಕ್ಕೂ ಮುಕ್ತವಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಜನತೆ ನಿಟ್ಟುಸಿರು ಬಿಟ್ಟಿದ್ದಾರೆ.

- Advertisement -
spot_img

Latest News

error: Content is protected !!