- Advertisement -
- Advertisement -
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿಯ ಹೆದ್ದಾರಿಯಲ್ಲಿ ಗುಡ್ಡ ಕುಸಿತವಾಗಿ, ಒಂದೇ ಕುಟುಂಬದ ಐವರು ಸೇರಿದಂತೆ ಒಟ್ಟು 9 ಮಂದಿ ಮಣ್ಣಿನಡಿ ಸಿಲುಕಿದ್ದು ಅದರಲ್ಲಿ ಓರ್ವ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ ಎನ್ನಲಾಗಿದೆ.
ಎರಡು ಕುಟುಂಬಗಳ ಒಟ್ಟು ಒಂಬತ್ತು ಮಂದಿ ಮಣ್ಣಿನಡಿ ಸಿಲುಕೊಂಡಿದ್ದು, ಮಣ್ಣಿನಲ್ಲಿ ಸಿಲುಕಿರುವವರನ್ನು ಲಕ್ಷ್ಮಣ ನಾಯ್ಕ (47), ಶಾಂತಿ ನಾಯ್ಕ (36), ರೋಶನ್ (11), ಅವಾಂತಿಕಾ (6), ಜಗನ್ನಾಥ(55 ) ಎಂದು ಗುರುತಿಸಲಾಗಿದೆ.ಇದೀಗ ಓರ್ವ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಮೃತದೇಹದ ಗುರುತುಪತ್ತೆಯಾಗಿಲ್ಲ.
ಇನ್ನು ಕೂಡಾ ಗುಡ್ಡ ಕುಸಿತವಾಗುವ ಸಾಧ್ಯತೆಯಿದ್ದು,ಕುಸಿದ ಕಡೆ ಪೋಲಿಸ್ ಸಿಬ್ಬಂದಿ ಯಾರನ್ನು ಹೋಗಲು ಬಿಡುತ್ತಿಲ್ಲ ಎನ್ನಲಾಗಿದೆ.
- Advertisement -