Monday, May 20, 2024
Homeಕರಾವಳಿಉಡುಪಿಶೀರೂರು ಪೂಜ್ಯ ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿಯವರ 57ನೇ ಜನ್ಮದಿನಾಚರಣೆ

ಶೀರೂರು ಪೂಜ್ಯ ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿಯವರ 57ನೇ ಜನ್ಮದಿನಾಚರಣೆ

spot_img
- Advertisement -
- Advertisement -

ಉಡುಪಿ : ವೃಂದಾವನಸ್ಥ ಪರಮಪೂಜ್ಯ ಶೀರೂರು ಶ್ರೀ ಲಕ್ಷ್ಮೀವರತೀರ್ಥ ಸ್ವಾಮೀಜಿಯವರ 57ನೇ ಜನ್ಮದಿನಾಚರಣೆ ಜೂ.8ರಂದು ಶ್ರೀ ಸಾಂದೀಪನಿ ಸಾಧನಾಶ್ರಮ ಕೇಮಾರು ಮಠ ಹಾಗೂ ಉಡುಪಿ ಪರಿಸರದ ವಿವಿಧ ಕಡೆಗಳಲ್ಲಿ ಪರಿಸರೋಪಯುಕ್ತವಾದ ವಿವಿಧ ರೀತಿಯ ಗಿಡಗಳನ್ನು ನೆಡುವುದರ ಮೂಲಕ ಸರಳ ರೀತಿಯಲ್ಲಿ ಆಚರಿಸಲಾಯಿತು.

ಶೀರೂರು ಶ್ರೀ ಲಕ್ಷ್ಮೀವರತೀರ್ಥ ಸ್ವಾಮೀಜಿ


ಶೀರೂರು ಶ್ರೀಗಳು ಪರಿಸರದ ಬಗ್ಗೆ ತೀರ ಕಾಳಜಿ ವಹಿಸಿದ್ದು ಅವರ ಜನ್ಮದಿನದಂದು ಭಕ್ತ ಜನರಿಗೆ ವಿವಿಧ ರೀತಿಯ ಗಿಡಗಳನ್ನು ವಿತರಿಸಿ ಜನ್ಮದಿನವನ್ನು ಆಚರಿಸುತ್ತಿದ್ದರು, ಈ ಸವಿನೆನಪಿಗಾಗಿ 57ನೇ ಜನ್ಮದಿನವಾದ ಈ ಬಾರಿಯೂ ವಿವಿಧ ಕಡೆಗಳಲ್ಲಿ ವಿವಿಧ ತಳಿಯ 57 ಸಸಿಗಳನ್ನು ನೆಡಲಾಯಿತು ಎಂದು ಪೂರ್ವಾಶ್ರಮದ ಸಹೋದರ ಲಾತವ್ಯ ಆಚಾರ್ಯ ಹೇಳಿದರು.

ಈ ಸಂದರ್ಭದಲ್ಲಿ ಸಾಂದೀಪನಿ ಸಾಧನಾಶ್ರಮ ಕೇಮಾರು ಮಠದ ಈಶ ವಿಠಲದಾಸ ಸ್ವಾಮೀಜಿಯವರಿಗೆ ವಿವಿಧ ತಳಿಯ 12 ಗಿಡಗಳನ್ನು ಅವರು ಹಸ್ತಾಂತರಿಸಿದರು.
ಶ್ರೀಗಳ ಪೂರ್ವಾಶ್ರಮದ ಸಹೋದರರಾದ ವಾದಿರಾಜ ಆಚಾರ್ಯ, ಶ್ರೀನಿವಾಸ ಆಚಾರ್ಯ ಹಾಗೂ ಪೂರ್ವಾಶ್ರಮದ ಸಂಬಂಧಿಕರಾದ ಪ್ರಹ್ಲಾದ ಆಚಾರ್ಯ, ಅರ್ಜುನ್ ಆಚಾರ್ಯ,ಅಕ್ಷೋಬ್ಯ ಆಚಾರ್ಯ ಹಾಗೂ ಇತರರು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!