Thursday, June 4, 2026
Homeಕರಾವಳಿಉಡುಪಿಉಡುಪಿ: ಅಂಗಡಿಯ ಮುಂಭಾಗವೇ ಆತ್ಮಹತ್ಯೆಗೆ ಶರಣಾದ ಯುವಕ

ಉಡುಪಿ: ಅಂಗಡಿಯ ಮುಂಭಾಗವೇ ಆತ್ಮಹತ್ಯೆಗೆ ಶರಣಾದ ಯುವಕ

- Advertisement -
- Advertisement -

ಕಾಪು: ಶಿರ್ವದ ಪೇಟೆಯ ರಸ್ತೆಯ ಬದಿಯ ಅಂಗಡಿಯೊಂದರ ಮುಂಭಾಗದ ಕಂಬಕ್ಕೆ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಮಟ್ಟಾರು ನಿವಾಸಿ ಅಕ್ಷತ್ ಪೂಜಾರಿ (35) ಎಂದು ಗುರುತಿಸಲಾಗಿದೆ.

ಈತ ವಿಪರೀತ ಮದ್ಯಸೇವನೆಯ ಚಟಕ್ಕೆ ಬಿದ್ದಿದ್ದು, ಇದರಿಂದಲೇ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಶಂಕಿಸಲಾಗಿದೆ. ಈತ ಗುರುವಾರ ರಾತ್ರಿಯಿಂದ ಶುಕ್ರವಾರ ಬೆಳಿಗ್ಗೆಯ ಅವಧಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಿರ್ವ ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಶಿರ್ವ ಠಾಣೆಯಲ್ಲಿ ದೂರು ದಾಖಲಾಗಿದೆ

- Advertisement -

Latest News

error: Content is protected !!