Wednesday, June 24, 2026
Homeತಾಜಾ ಸುದ್ದಿಶಿವಸೇನೆ ಮುಖಂಡ, ಸಂಸದ ಸಂಜಯ್ ರಾವತ್ 4 ದಿನ ಇಡಿ ಕಸ್ಟಡಿಗೆ

ಶಿವಸೇನೆ ಮುಖಂಡ, ಸಂಸದ ಸಂಜಯ್ ರಾವತ್ 4 ದಿನ ಇಡಿ ಕಸ್ಟಡಿಗೆ

- Advertisement -
- Advertisement -

ಮುಂಬೈ: ಭೂ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತ ಶಿವಸೇನಾ ಸಂಸದ ಸಂಜಯ್ ರಾವತ್ ಅವರನ್ನು ನಾಲ್ಕು ದಿನಗಳ ಕಾಲ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ಒಪ್ಪಿಸಲಾಗಿದೆ. ತನಿಖಾ ಸಂಸ್ಥೆ ಇಡಿ ಎಂಟು ದಿನಗಳ ಕಸ್ಟಡಿಗೆ ಕೇಳಿತ್ತು. ಆದರೆ ಮುಂಬೈ ವಿಶೇಷ ನ್ಯಾಯಾಲಯ 4 ದಿನ ಕಸ್ಟಡಿಗೆ ನೀಡಿತು.

ಇಡಿ ಕಸ್ಟಡಿಯಲ್ಲಿ ಸೇನಾ ನಾಯಕ ಸಂಜಯ್ ರಾವತ್ ಗೆ ಮನೆಯಲ್ಲಿ ತಯಾರಿಸಿದ ಆಹಾರ ಮತ್ತು ಔಷಧವನ್ನು ತೆಗೆದುಕೊಳ್ಳಲು ಅನುಮತಿಸಲಾಗಿದೆ. ಅವರ ಅನಾರೋಗ್ಯದ ಹಿನ್ನೆಲೆಯಲ್ಲಿ ಅಗತ್ಯ ಚಿಕಿತ್ಸೆ ಮತ್ತು ವಿಚಾರಣೆಯ ಸಮಯವನ್ನು ಅಗತ್ಯವಿದ್ದಲ್ಲಿ ಸಹ ಚಿಕಿತ್ಸೆ ಬಗ್ಗೆ ನೋಡಿಕೊಳ್ಳಬೇಕು ಎಂದು ನ್ಯಾಯಾಲಯ ಹೇಳಿದೆ.

- Advertisement -

Latest News

error: Content is protected !!