- Advertisement -
- Advertisement -
ಬೆಳಗಾವಿಯಲ್ಲಿ ನಡೆದ ಭೀಕರ ಅಪಘಾತಕ್ಕೆ ಕಾಂಗ್ರೆಸ್ ಮುಖಂಡ ಶಿವಕುಮಾರ್ ಕೌಡಿಚ್ಚಾರ್ ಬಲಿಯಾಗಿದ್ದಾರೆ.
ತಮಿಳು ಕಾರ್ಮಿಕ ಮುಖಂಡ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಮಾಜಿ ಅಧ್ಯಕ್ಷ ಶಿವಕುಮಾರ್ ಕೌಡಿಚ್ಚಾರ್ ತುರ್ತು ಕೆಲಸದ ನಿಮಿತ್ತ ಬೆಳಗಾವಿಗೆ ತೆರಳಿದ್ದರು. ಈ ವೇಳೆ ಬೆಳಗಾವಿಯ ಖಾನಾಪುರ ಎಂಬಲ್ಲಿ ಇವರು ಚಲಾಯಿಸುತ್ತಿದ್ದ ಬೈಕ್ ಡಿವೈಡರ್ ಗೆ ಢಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.
ತಮಿಳು ಮುಖಂಡರಾಗಿ ಕಾಂಗ್ರೆಸ್ ಕಾರ್ಮಿಕ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಇವರ ಅಗಲಿಕೆಗೆ ಅನೇಕರು ಕಂಬನಿ ಮಿಡಿದಿದ್ದಾರೆ.
- Advertisement -