ನವದೆಹಲಿ : ಇಂದು ಸಂಜೆ 6 ಗಂಟೆಗೆ ಕೇಂದ್ರ ಸಚಿವ ಸಂಪುಟವು ಪುನಾರಚನೆಗೊಳ್ಳಲಿದೆ. ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟಕ್ಕೆ ನೂತನವಾಗಿ 43 ಸಚಿವರು ಸೇರ್ಪಡೆಗೊಳ್ಳಲಿದ್ದಾರೆ ಎನ್ನಲಾಗಿದೆ. ಅಲ್ಲದೇ ಮೋದಿ ಸಚಿವ ಸಂಪುಟದಲ್ಲಿ ರಾಜ್ಯದ ಮೂವರಿಗೆ ಕೇಂದ್ರ ಸಚಿವ ಸ್ಥಾನ ಒಲಿದಿದೆ ಎನ್ನಲಾಗುತ್ತಿದೆ. ಸಚಿವರಾಗಿ ಶೋಭಾ ಕರಂದ್ಲಾಜೆ, ಎ ನಾರಾಯಣಸ್ವಾಮಿ ಹಾಗೂ ರಾಜೀವ್ ಚಂದ್ರಶೇಖರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗುತ್ತಿದೆ.
ಪ್ರಧಾನಿ ನರೇಂದ್ರ ಮೋದಿಯವರ ಕೇಂದ್ರ ಸಚಿವ ಸಂಪುಟವು ಇಂದು ಸಂಜೆ 6 ಗಂಟೆಗೆ ಪುನಾರಚನೆಯಾಗುತ್ತಿದೆ. ಇಂತಹ ಸಚಿವ ಸಂಪುಟದಲ್ಲಿನ ಹಾಲಿ ಸಚಿವರಿಗೆ ಕೋಕ್ ನೀಡಿ, ಹೊಸದಾಗಿ 43 ನೂತನ ಸಚಿವರನ್ನು ಸೇರ್ಪಡೆಗೊಳಿಸಿಕೊಳ್ಳಲಾಗುತ್ತಿದೆ ಎನ್ನಲಾಗಿದೆ. ಈಗಾಗಲೇ ಕೇಂದ್ರ ಸಚಿವರಾಗಿದ್ದಂತ ಕರ್ನಾಟಕದ ಡಿವಿ ಸದಾನಂದಗೌಡ, ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಳ್ ಸೇರಿದಂತೆ ನಾಲ್ವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಸಂಜೆ 6 ಗಂಟೆಗೆ ನಿಗದಿಯಾಗಿರುವಂತ ಕೇಂದ್ರ ಸಚಿವ ಸಂಪುಟದ ಪುನಾರಚನೆಯಲ್ಲಿ ರಾಜ್ಯದಿಂದ ಮೂವರಿಗೆ ಕೇಂದ್ರ ಸಚಿವ ಸ್ಥಾನ ನೀಡಲಾಗುತ್ತಿರೋದು ಫೈನಲ್ ಆದಂತೆ ಆಗಿದೆ. ಆದರೆ ಈ ಬಗ್ಗೆ ಎಲ್ಲೂ ಅಧಿಕೃತ ಮಾಹಿತಿ ಹೊರ ಬಿದ್ದಿಲ್ಲ. ಸಂಸದೆ ಶೋಭಾ ಕರಂದ್ಲಾಜೆ, ಎ.ನಾರಾಯಣ ಸ್ವಾಮಿ ಹಾಗೂ ರಾಜೀವ್ ಚಂದ್ರಶೇಖರ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ಸೇರ್ಪಡೆಗೊಳ್ಳಲಿದ್ದಾರೆ ಎನ್ನಲಾಗಿದೆ. ಆ ಬಗ್ಗೆ ಸಂಜೆ 6 ಗಂಟೆಯ ವೇಳೆಗೆ ಅಧಿಕೃತ ಪಟ್ಟಿ ಬಿಡುಗಡೆ ಆಗಲಿದೆ.