- Advertisement -
- Advertisement -
ಹುಬ್ಬಳ್ಳಿ: ರಾಷ್ಟ್ರೀಯ ಉದ್ಯೋಗ ಮಿಷನ್ ನ ಅಂಗವಾಗಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹುಬ್ಬಳ್ಳಿಯಲ್ಲಿ ನೇಮಕಾತಿ ಪತ್ರ ವಿತರಿಸಿದರು.
ದೇಶಾದ್ಯಂತ ಇಂದು 75 ಸಾವಿರ ಅಭ್ಯರ್ಥಿಗಳಿಗೆ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳ ಪರೀಕ್ಷೆಗಳಲ್ಲಿ ಆಯ್ಕೆಯಾದವರಿಗೆ ನೇಮಕಾತಿ ಪತ್ರ ವಿತರಿಸುವ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು.
ಹುಬ್ಬಳ್ಳಿಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಶೋಭಾ ಕರಂದ್ಲಾಜೆ, ಇತ್ತೀಚೆಗೆ ಕೇಂದ್ರ ಸರ್ಕಾರದ ಪರೀಕ್ಷೆಗಳನ್ನು ಬರೆದು ಆಯ್ಕೆಯಾಗಿದ್ದ 200 ಜನರಿಗೆ ನೇಮಕಾತಿ ಪತ್ರ ಹಸ್ತಾಂತರ ಮಾಡಿದರು.
- Advertisement -