Sunday, May 19, 2024
Homeತಾಜಾ ಸುದ್ದಿರಾಜಕೀಯ ಪ್ರವೇಶಿಸಿದ ಸುರೇಶ ಅಂಗಡಿ ಪುತ್ರಿ ಶ್ರದ್ಧಾ ಶೆಟ್ಟರ್ ‌

ರಾಜಕೀಯ ಪ್ರವೇಶಿಸಿದ ಸುರೇಶ ಅಂಗಡಿ ಪುತ್ರಿ ಶ್ರದ್ಧಾ ಶೆಟ್ಟರ್ ‌

spot_img
- Advertisement -
- Advertisement -

ಬೆಳಗಾವಿ: ಕೆಲವು ದಿನಗಳ ಹಿಂದೆ ರಾಜಕಾರಣಿ ಸುರೇಶ ಅಂಗಡಿ ಅಕಾಲಿಕ ನಿಧನದ ನಂತರ ಇದೇ ಮೊದಲ ಬಾರಿಗೆ ಪುತ್ರಿ ಶ್ರದ್ಧಾ ಶೆಟ್ಟರ್‌ ಬಹಿರಂಗ ಸಮಾರಂಭದಲ್ಲಿ ಕಾಣಿಸಿಕೊಳ್ಳುವ ಮೂಲಕ ಸಕ್ರಿಯ ರಾಜಕಾರಣಕ್ಕೆ ಎಂಟ್ರಿ ಕೊಡುವ ಸೂಚನೆ ನೀಡಿದ್ದಾರೆ.

ಜಗದೀಶ ಶೆಟ್ಟರ್‌ ಅವರ ಸೊಸೆಯಾಗಿರುವ ಸುರೇಶ ಅಂಗಡಿ ಅವರ ಕಿರಿಯ ಪುತ್ರಿ ಶ್ರದ್ಧಾ ಶೆಟ್ಟರ್‌ ಬೆಳಗಾವಿ ಎಪಿಎಂಸಿ ಆವರಣದಲ್ಲಿ ಶುಕ್ರವಾರ ಬಿಜೆಪಿ ಹಮ್ಮಿಕೊಂಡಿದ್ದ ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆ ಕಾರ್ಯಕ್ರಮದಲ್ಲಿ ವೇದಿಕೆ ಹಂಚಿಕೊಂಡರು.ಕಾರ್ಯಕ್ರಮದ ನಂತರ ಶ್ರದ್ಧಾ ಶೆಟ್ಟರ್‌ ರೈತರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದರು. ಮಹಿಳಾ ರೈತರನ್ನು ಅಪ್ಪಿಕೊಂಡು ಯೋಗಕ್ಷೇಮ ವಿಚಾರಿಸುತ್ತಿರುವುದು ಗಮನ ಸೆಳೆಯಿತು.

- Advertisement -
spot_img

Latest News

error: Content is protected !!