Monday, April 29, 2024
Homeಕರಾವಳಿಉಡುಪಿಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಪುನರ್ ಪ್ರತಿಷ್ಠೆ, ಬ್ರಹ್ಮಕಲಶ ಪುಣ್ಯ ಉತ್ಸವ: ಆಮಂತ್ರಣ ಪತ್ರ ಬಿಡುಗಡೆ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಪುನರ್ ಪ್ರತಿಷ್ಠೆ, ಬ್ರಹ್ಮಕಲಶ ಪುಣ್ಯ ಉತ್ಸವ: ಆಮಂತ್ರಣ ಪತ್ರ ಬಿಡುಗಡೆ

spot_img
- Advertisement -
- Advertisement -

ಕಾಪು: ಸಮಗ್ರವಾಗಿ ಜೀರ್ಣೋದ್ಧಾರಗೊಳ್ಳುತ್ತಿರುವ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮ ಕಲಶ ಪುಣ್ಯ ಉತ್ಸವದ ಕಾರ್ಯಕ್ರಮಗಳು ಏಪ್ರಿಲ್ ತಿಂಗಳ 1 ನೇ ತಾರೀಕಿನಿಂದ 15 ನೇ ತಾರೀಕಿನವರೆಗೆ ವಿಜೃಂಭಣೆಯಿಂದ ನಡೆಯಲಿದೆ .

ಬ್ರಹ್ಮ ಕಲಶ ಪುಣ್ಯ ಉತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬ್ರಹ್ಮ ಕಲಶ ಪುಣ್ಯ ಉತ್ಸವ ಸಮಿತಿಯ ಅಧ್ಯಕ್ಷರಾದ ನಾಡೋಜ ಡಾ ಜಿ ಶಂಕರ್ ರವರ ಉಪಸ್ಥಿತಿಯಲ್ಲಿ ಜ್ಯೋತಿಷಿ ಮಾಧವನ್ ಪೊದುವಾಳರು ಬಿಡುಗಡೆಗೊಳಿಸಿದರು .

ಈ ಸಂದರ್ಭದಲ್ಲಿ ದ ಕ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಜಯ ಸಿ ಕೋಟ್ಯಾನ್ , ಉಪಾಧ್ಯಕ್ಷರಾದ ಸುಭಾಶ್ಚಂದ್ರ ಕಾಂಚನ್ , ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಗುಂಡು ಬಿ ಅಮೀನ್ , ಕ್ಷೇತ್ರ ಆಡಳಿತ ಸಮಿತಿಯ ಅಧ್ಯಕ್ಷರಾದ ವಾಸುದೇವ ಸಾಲ್ಯಾನ್ , ಭುವನೇಂದ್ರ ಕಿದಿಯೂರ್ , ಕ್ಷೇತ್ರದ ಅರ್ಚಕರಾದ ರಾಘವೇಂದ್ರ ಉಪಾಧ್ಯಾಯ ಮತ್ತು ವಿಷ್ಣುಮೂರ್ತಿ ಉಪಾಧ್ಯಾಯ , ಮಲ್ಪೆ ಮೀನುಗಾರರ ಸಂಘದ ದ ಅಧ್ಯಕ್ಷರಾದ ದಯಾನಂದ ಸುವರ್ಣ , ಮೋಹನ್ ಬೆಂಗ್ರೆ , ಶ್ರೀಮತಿ ಅಪ್ಪಿ ಎಸ್ ಸಾಲ್ಯಾನ್ , ಸರಳಾ ಕಾಂಚನ್ ಮತ್ತಿರರು ಉಪಸ್ಥಿತರಿದ್ದರು .

- Advertisement -
spot_img

Latest News

error: Content is protected !!