ಮಂಗಳೂರು : ಮಾಜಿ ಸಿಎಂ ಕಾಂಗ್ರೆಸ್ ನ ಸಿದ್ದರಾಮಯ್ಯ ಇಂದು ಬೆಳ್ತಂಗಡಿ ಪ್ರವಾಸದಲ್ಲಿದ್ದು ಮಂಗಳೂರು ಏರ್ಪೋರ್ಟ್ ಗೆ ಆಗಮಿಸಿದ್ದು ಬೆಳ್ತಂಗಡಿಗೆ ಕಾರಿನಲ್ಲಿ ಪ್ರಯಾಣ ಬೆಳೆಸಿದ್ದಾರೆ.
ಇದೇ ವೇಳೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಕುಕ್ಕರ್ ಬ್ಲಾಸ್ಟ್ ರಾಜಕೀಯಕ್ಕೆ ಬಳಸಿದ್ದಾರೆ ಅಂತ ಕೆಪಿಸಿಸಿ ಅಧ್ಯಕ್ಷರು ಹೇಳಿದ್ದಾರೆ ಅಷ್ಟೇ. ಅವರು ಟೆರರಿಸಂ ಸಪೋರ್ಟ್ ಮಾಡ್ತೀನಿ ಅಂತ ಹೇಳಿದರಾ? ಬಿಜೆಪಿಯವರು ತಿರುಚಿ ಜನರಿಗೆ ತಪ್ಪು ಮಾಹಿತಿ ನೀಡ್ತಾ ಇದ್ದಾರೆ ಎಂದ್ರು.
ಇನ್ನು ಬಿಜೆಪಿಯ ಮೇಲೆ ವಾಗ್ದಾಳಿ ಮುಂದುವರೆಸಿದ ಅವರು ಬಿಜೆಪಿ ಡಬಲ್ ಇಂಜಿನ್ ಸರ್ಕಾರ ಭಯೋತ್ಪಾದನೆ ಹತ್ತಿಕೆದ್ಯಾ?.ದೇಶದಲ್ಲಿ ಉಗ್ರಗಾಮಿ ಚಟುವಟಿಕೆ ಹತ್ತಿಕ್ಕಿ, ಬಿಜೆಪಿ ಇದ್ಯಲ್ಲ.ಬರೀ ಜನರನ್ನ ಪ್ರಚೋದನೆ ಮಾಡಿ, ಭಾವನಾತ್ಮಕ ವಿಚಾರ ಮಾತನಾಡೋದಲ್ಲ ಎಂದ್ರು. ನೈತಿಕ ಪೊಲೀಸ್ ಗಿರಿ ನಡೆಸಲು ಕಾನೂನಿನಲ್ಲಿ ಅವಕಾಶ ಇಲ್ಲ.ಮುಖ್ಯಮಂತ್ರಿಯೇ ನೈತಿಕ ಪೊಲೀಸ್ ಗಿರಿ ಪ್ರೇರೇಪಿಸುವ ಕೆಲಸ ಮಾಡ್ತಿದಾರೆ.ಎರಡು ತಿಂಗಳಲ್ಲಿ ಸುಮಾರು ಏಳೆಂಟು ಕೇಸುಗಳು ಆಗಿದೆ.ಇದನ್ನ ಖಂಡಿಸ್ತೇನೆ, ಹಾಗೂ ಅವರ ಮೇಲೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದ್ರು. ಮುಖ್ಯಮಂತ್ರಿಗೆ ಕಾನೂನು ಗೊತ್ತಿದ್ಯಾ ಗೊತ್ತಿಲ್ಲ, ಅವರು ಹೇಳಿದ್ರು ಅಂತ ಮಾಡ್ತಾರೆ.ಸಂವಿಧಾನ ಮತ್ತು ಐಪಿಸಿಯಲ್ಲಿ ನೈತಿಕ ಪೊಲೀಸ್ ಗಿರಿಗೆ ಅವಕಾಶ ಇದ್ಯಾ? ಎಂದು ಪ್ರಶ್ನಿಸಿದ್ರು,
ಸಿದ್ದರಾಮಯ್ಯನವರನ್ನು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಹರೀಶ್ ಕುಮಾರ್, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ರಮಾನಾಥ್ ರೈ, ಯು ಟಿ ಖಾದರ್, ಐವನ್ ಡಿಸೋಜಾ ಮತ್ತಿತರರು ಸ್ವಾಗತಿಸಿದರು.