- Advertisement -
- Advertisement -
ಉಡುಪಿ: ನಾನು ಹುಟ್ಟಿನಿಂದಲೂ ಕಾಂಗ್ರೆಸ್. ಈಗ ಬಿಜೆಪಿ ಸೇರಿದ್ದೇನೆ. ಆದ್ರೆ ಸಿದ್ದರಾಮಯ್ಯ ಇದುವರೆಗೂ ಏಳು ಬಾರಿ ಪಕ್ಷವನ್ನು ಬದಲಾಯಿಸಿದ್ದಾರೆ ಎಂದು ಬಿಜೆಪಿ ಮುಖಂಡ ಪ್ರಮೋದ್ ಮಧ್ವರಾಜ್ ವಾಗ್ದಾಳಿ ನಡೆಸಿದ್ದಾರೆ.
ಉಡುಪಿಯಲ್ಲಿ ನಡೆದ ಪ್ರಜಾಧ್ವನಿ ಯಾತ್ರೆಯಲ್ಲಿ ಪ್ರಮೋದ್ ಮಧ್ವರಾಜ್ ವಿರುದ್ಧ ಕಾಂಗ್ರೆಸ್ ನಾಯಕರು ವಾಗ್ದಾಳಿ ನಡೆಸಿದ್ದಕ್ಕೆ ತಿರುಗೇಟು ಕೊಟ್ಟ ಪ್ರಮೋದ್ ಮಧ್ವರಾಜ್, ಸಿದ್ದರಾಮಯ್ಯ ಹಾಗೂ ಡಿಕೆಶಿಯವರು ಬೇರೆ ಪಕ್ಷದಿಂದ ಕಾಂಗ್ರೆಸ್ಗೆ ಬರಬೇಡಿ ಅಂತ ಘೋಷಿಸಲಿ ಎಂದು ಸವಾಲೆಸೆದ್ರು. ಸಿದ್ದರಾಮಯ್ಯ 1978 ರಲ್ಲಿ ರೈತ ಸಂಘ, 1983 ರಲ್ಲಿ ಭಾರತೀಯ ಲೋಕದಳ, ಸಮಾಜಪಕ್ಷ ಜನತಾದಳ, ಜಾತ್ಯಾತೀತ ಜನತಾದಳ, ಅಹಿಂದ ಸೇರಿಕೊಂಡ್ರು. ಅಶಿಸ್ತಿನ ವಾತಾವರಣ ಸೃಷ್ಟಿ ಮಾಡಿದ್ದಕ್ಕೆ ಸಿದ್ದರಾಮಯ್ಯ ವಜಾಗೊಂಡಿದ್ರು ವಾಗ್ದಾಳಿ ನಡೆಸಿದ್ರು.
- Advertisement -