Saturday, June 28, 2025
Homeತಾಜಾ ಸುದ್ದಿಸಿದ್ದರಾಮಯ್ಯ ಒಂದೇ ಕ್ಷೇತ್ರದಿಂದ ಸ್ಪರ್ಧಿಸಿದ್ರೆ ಸೋಲು ಖಚಿತ: ಇದು ದೇವಿಯ ಸಂದೇಶ

ಸಿದ್ದರಾಮಯ್ಯ ಒಂದೇ ಕ್ಷೇತ್ರದಿಂದ ಸ್ಪರ್ಧಿಸಿದ್ರೆ ಸೋಲು ಖಚಿತ: ಇದು ದೇವಿಯ ಸಂದೇಶ

spot_img
- Advertisement -
- Advertisement -

ಮಂಡ್ಯ: ಮಾಜಿ ಸಿಎಂ ಸಿದ್ದರಾಮಯ್ಯ ಎರಡು ಕ್ಷೇತ್ರದಿಂದ ಸ್ಪರ್ಧೆ ಮಾಡಲೇ ಬೇಕು, ಒಂದು ಕ್ಷೇತ್ರದಿಂದ ಸ್ಪರ್ಧಿಸಿದರೆ ಸೋಲು ಕಟ್ಟಿಟ್ಟ ಬುತ್ತಿ ಎಂದು ಪೂಜಾರಿ ಮೈ ಮೇಲೆ ಬಂದ ಆದಿನಾಡು ಚಿಕ್ಕಮ್ಮ ದೇವಿ, ಸಿದ್ದು ಪುತ್ರ ಯತೀಂದ್ರಗೆ ಸಂದೇಶ ನೀಡಿದೆ ಎನ್ನಲಾಗಿದೆ.

ಸಿದ್ದರಾಮಯ್ಯ ಪುತ್ರ, ಶಾಸಕ ಯತೀಂದ್ರ ಸಿದ್ಧರಾಮಯ್ಯ ಕಳೆದವಾರ ಮಂಡ್ಯ ಜಿಲ್ಲೆಯ ಮಳವಳ್ಳಿಯ ಚೊಟ್ಟನಹಳ್ಳಿ ದೇವಾಲಯಕ್ಕೆ ತೆರಳಿದ್ದರು. ಯತೀಂದ್ರ ಸಿದ್ದರಾಮಯ್ಯ ದೇವಿಯ ದರ್ಶನ ಪಡೆದು ಪೂಜೆ ಸಲ್ಲಿಸಿದ್ದರು. ಈ ವೇಳೆ ಪೂಜಾರಿ ಮೈ ಮೇಲೆ ಬಂದ ಆದಿನಾಡು ಚಿಕ್ಕಮ್ಮ ದೇವಿ “ಬಾಹುಬಲ ಎರೆಡು ಕಡೆ ಚಾಚಲೇ” ಎಂದು ಸಂದೇಶಕೊಟ್ಟಿದೆ. ಆದಿನಾಡು ಚಿಕ್ಕಮ್ಮ ದೇವಿ ಕೊಟ್ಟ ಸಂದೇಶ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.

- Advertisement -
spot_img

Latest News

error: Content is protected !!