- Advertisement -
- Advertisement -
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಕೊರೊನಾ ವೈರಸ್ ನೆಗೆಟಿವ್ ಹಿನ್ನೆಲೆಯಲ್ಲಿ ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ.
ಯಾವುದೇ ರೋಗ ಲಕ್ಷಣ ಇಲ್ಲದೇ ಇದ್ದರೂ ವರದಿಯಲ್ಲಿ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ಸಿದ್ದರಾಮಯ್ಯ ಆಗಸ್ಟ್ 3 ರಂದು ದಾಖಲಾಗಿದ್ದರು.
ಸಿದ್ದರಾಮಯ್ಯ ಅವರಿಗೆ ಬುಧವಾರ ನಡೆದ ಪರೀಕ್ಷೆಯಲ್ಲಿ ಕೊರೊನಾ ನೆಗೆಟಿವ್ ವರದಿ ಬಂದಿದ್ದು, ಇಂದು ಮಧ್ಯಾನ್ಹದೊಳಗೆ ಸಿದ್ದರಾಮಯ್ಯ ಅವರನ್ನು ಡಿಸ್ಜಾರ್ಜ್ ಮಾಡಲಾಗುವುದು.
ಇದೇ ವೇಳೆ ನಿನ್ನೆ ಹುಟ್ಟುಹಬ್ಬಕ್ಕೆ ಶುಭ ಕೋರಿದ ಎಲ್ಲರಿಗೂ ಧನ್ಯವಾದ ಅರ್ಪಿಸಿದ ಸಿದ್ದರಾಮಯ್ಯ, ನಾಡಿನ ಸೇವೆ ಮಾಡುವ ಮೂಲಕ ನಿಮ್ಮ ಋಣ ತೀರಿಸುವೆ ಎಂದಿದ್ದರು.
ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ಕೂಡ ಕೊರೊನಾ ಪಾಸಿಟಿವ್ ಬಂದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
- Advertisement -