- Advertisement -
- Advertisement -
ಮಂಗಳೂರು: ಶ್ರೀ ಸಿದ್ದೇಶ್ವರ ಸ್ವಾಮೀಜಿ ನಿಧನದಿಂದ ನಾಡಿಗೆ ಮಾತ್ರವಲ್ಲದೇ ದೇಶ ವಿದೇಶಗಳಲ್ಲಿನ ಅವರ ಅಪಾರ ಭಕ್ತಸಮೂಹಕ್ಕೆ ಆಘಾತವನ್ನು ಉಂಟು ಮಾಡಿದೆ ಎಂದು ಸಂಸದ ನಳಿನ್ಕುಮಾರ್ ಕಟೀಲ್ ಹೇಳಿದ್ದಾರೆ.
ಸಿದ್ದೇಶ್ವರ ಸ್ವಾಮೀಜಿ ಅವರು, ವಿಜಯಪುರದ ಜೀವಂತ ದೇವರು ಎಂದೇ ಪ್ರಸಿದ್ಧರಾದವರು. ಇವರು ಸಂತರಷ್ಟೇ ಅಲ್ಲ ಜ್ಞಾನೋಪಾಸಕರು ಕೂಡ ಆಗಿದ್ದರು. ಕನ್ನಡ, ಸಂಸ್ಕೃತ, ಇಂಗ್ಲಿಷ್, ಮರಾಠಿ ಮತ್ತು ಹಿಂದಿ ಭಾಷೆಗಳಲ್ಲಿ ನಿಷ್ಟಾಂತರಾಗಿದ್ದರು. ಒಬ್ಬ ಜ್ಞಾನಯೋಗಿಗಳ ರೂಪದಲ್ಲಿ ಅವರು ಮುಂದೆಯೂ ನಮ್ಮೊಂದಿಗೆ ಇರುತ್ತಾರೆ ಎಂದು ಕಟೀಲ್ ತಿಳಿಸಿದ್ದಾರೆ.
- Advertisement -