- Advertisement -
- Advertisement -
ಉಡುಪಿ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವ ಸಮಿತಿಯ ವಿಶೇಷ ಸಭೆ ಸಮಿತಿಯ ಸಂಚಾಲಕ ಮುಹಮ್ಮದ್ ಶರೀಫ್ ಕಾರ್ಕಳ ಅಧ್ಯಕ್ಷತೆಯಲ್ಲಿ ಫೆ.18 ಮಂಗಳವಾರದಂದು ಉಡುಪಿ ಪತ್ರಿಕಾ ಭವನದಲ್ಲಿ ನಡೆಯಿತು.
ಎಪ್ರಿಲ್ 5ರ ಶನಿವಾರ ಸಂಜೆ ಉಡುಪಿಯ ಓಷಿಯನ್ ಪರ್ಲ್ ಹೊಟೇಲ್ ಸಭಾಂಗಣದಲ್ಲಿ ರಜತ ಮಹೋತ್ಸವದ ಸಮಾರೋಪ ಸಮಾರಂಭವನ್ನು ನಡೆಸಲು ತೀರ್ಮಾನಿಸಲಾಯಿತು.
ಸಮಾರಂಭದ ಪೂರ್ವಭಾವಿಯಾಗಿ ಎಲ್ಲ ತಾಲೂಕು ಸಂಘದವರೊಂದಿಗೆ ಸೇರಿ ದಾನಿಗಳಿಂದ ದೇಣಿಗೆ ಸಂಗ್ರಹಿಸುವ ಬಗ್ಗೆ ನಿರ್ಧರಿಸಲಾಗಿದ್ದು, ಸಮಾರೋಪ ಸಮಾರಂಭದಲ್ಲಿ ಕ್ರೀಡಾಕೂಟದ ವಿಜೇತರಿಗೆ ಬಹುಮಾನ ವಿತರಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲು ನಿರ್ಣಯ ಮಾಡಲಾಯಿತು.
- Advertisement -