Saturday, May 4, 2024
Homeಕರಾವಳಿಮಂಗಳೂರು: ಜಿಲ್ಲೆಯಲ್ಲಿ ಸರಳ ಗಣೇಶೋತ್ಸವ ಆಚರಣೆ; ಸಾರ್ವಜನಿಕ ಗಣೇಶೋತ್ಸವ‌ಕ್ಕೆ ನಿರ್ಬಂಧ!

ಮಂಗಳೂರು: ಜಿಲ್ಲೆಯಲ್ಲಿ ಸರಳ ಗಣೇಶೋತ್ಸವ ಆಚರಣೆ; ಸಾರ್ವಜನಿಕ ಗಣೇಶೋತ್ಸವ‌ಕ್ಕೆ ನಿರ್ಬಂಧ!

spot_img
- Advertisement -
- Advertisement -

ಮಂಗಳೂರು: ದ.ಕ ಜಿಲ್ಲೆಯಲ್ಲಿ ಗಣೇಶೋತ್ಸವ ಆಚರಣೆ ಸಂಬಂಧ ನಿಯಾಮವಳಿ ಪ್ರಕಟಗೊಂಡಿದ್ದು, ಸರ್ಕಾರದ ಆದೇಶದಲ್ಲಿ ಕೆಲವು ಬದಲಾವಣೆ ಮಾಡಿ ದ.ಕ. ಜಿಲ್ಲಾಡಳಿತ ಮಾರ್ಗಸೂಚಿ ಪ್ರಕಟಿಸಿದೆ. ದ.ಕ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಈ ಕುರಿತು ಸೆ.7ರಂದು ಪರಿಷ್ಕೃತ ಆದೇಶ ಹೊರಬೀಳಲಿದೆ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಜರಗಿದ ಜಿಲ್ಲಾ ವಿಪತ್ತು ನಿರ್ವಹಣ ಪ್ರಾಧಿಕಾರದ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಗಿದೆ. ರಾಜ್ಯ ಸರಕಾರದ ಮಾರ್ಗಸೂಚಿಯಲ್ಲಿ ಕೆಲವು ಬದಲಾವಣೆಗಳೊಂದಿಗೆ ಕಳೆದ ವರ್ಷದ ರೀತಿಯಲ್ಲೇ ಸರಳ ರೀತಿಯ ಗಣೇಶೋತ್ಸವ ಆಚರಣೆಗೆ ಸಂಬಂಧಪಟ್ಟು ಮಂಗಳವಾರ ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಡಿಸಿ ಡಾ| ರಾಜೇಂದ್ರ ಕೆ.ವಿ. ಅವರು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಗಣೇಶೋತ್ಸವ ಮೂರು ದಿನಗಳಿಗೆ ಸೀಮಿತ. ಮೈದಾನಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಶಾಮಿಯಾನ, ಪೆಂಡಾಲ್‌ ಹಾಕಿ ಸಾರ್ವಜನಿಕ ಗಣೇಶೋತ್ಸವ‌ಕ್ಕೆ ನಿರ್ಬಂಧ ಸಹಿತ ಕೆಲವು ನಿರ್ಧಾರಗಳನ್ನು ಸಭೆಯಲ್ಲಿ ಕೈಗೊಳ್ಳಲಾಗಿದೆ ಎನ್ನಲಾಗಿದೆ.

- Advertisement -
spot_img

Latest News

error: Content is protected !!