- Advertisement -
- Advertisement -
ಸುಳ್ಯ : ನಗರ ಪಂಚಾಯಿತಿನ ಕಸ ಸಾಗಾಟಕ್ಕೆ ಸಿಬ್ಬಂದಿ ಕೊರತೆಯಾದ ಹಿನ್ನೆಲೆ ವಾಹನ ಸುಳ್ಯ ನ.ಪಂ. ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಅವರೇ ಕಸ ಸಾಗಾಟ ವಾಹನದ ಡ್ರೈವರ್ ಆಗಿ ಕಾರ್ಯ ನಿರ್ವಹಿಸಿದ ಘಟನೆ ನಡೆದಿದೆ
ಎರಡು ದಿನಗಳಿಂದ ಸುಳ್ಯ ನಗರದಲ್ಲಿ ತ್ಯಾಜ್ಯ ಸಂಗ್ರಹಕ್ಕೆ ಸಿಬ್ಬಂದಿ ಕೊರತೆ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಅಧ್ಯಕ್ಷ ವಿನಯಕುಮಾರ್ ತಾತ್ಕಾಲಿಕ ಸಿಬ್ಬಂದಿ ಹುಡುಕುವ ಬದಲು ತಾನೇ ಸ್ವತಃ ಲಭ್ಯರಿದ್ದ ಕಾರ್ಮಿಕರೊಂದಿಗೆ ಒಬ್ಬ ಸಾಮಾನ್ಯ ಪ್ರಜೆಯಂತೆ ಕಸ ವಿಲೇವಾರಿಗೆ ಸಹಕರಿಸಿ ಮಾದರಿ ಜನಪ್ರತಿನಿಧಿ ಎನಿಸಿಕೊಂಡಿದ್ದಾರೆ.
ಆರೋಗ್ಯ ನಿರೀಕ್ಷಕ ಲಿಂಗರಾಜು ಕೂಡ ಅಧ್ಯಕ್ಷರಿಗೆ ಸಾಥ್ ನೀಡಿದರು. ನಗರ ಪಂಚಾಯತ್ ಅಧ್ಯಕ್ಷರ ಈ ನಡೆಗೆ ಸಾರ್ವಜನಿಕ ವಲಯದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.
- Advertisement -