Sunday, May 5, 2024
Homeಕರಾವಳಿದ್ವಿತೀಯ ಪಿಯುಸಿ ಪರೀಕ್ಷೆ ರದ್ದಾಗಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

ದ್ವಿತೀಯ ಪಿಯುಸಿ ಪರೀಕ್ಷೆ ರದ್ದಾಗಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

spot_img
- Advertisement -
- Advertisement -

ಶಿರಸಿ: ದ್ವಿತೀಯ ಪಿಯುಸಿಯ ಪರೀಕ್ಷೆ ರದ್ದಾಗಿರುವ ಹಿನ್ನೆಲೆಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಖುಷಿಯಿಂದ ಕುಣಿದಾಡುತ್ತಿದ್ದರೆ, ಅದೇ ಇನ್ನೊಂದೆಡೆ, ತುಂಬಾ ಶ್ರಮಪಟ್ಟು ಓದಿ, ರ್ಯಾಂಕ್‌ ಬರುವ ನಿರೀಕ್ಷೆಯಲ್ಲಿ ಕಾದುಕುಳಿತಿರುವ ವಿದ್ಯಾರ್ಥಿಗಳಿಗೆ ಶಾಕ್‌ ಆಗಿದೆ.

ಇಂತಹದ್ದೇ ಒಂದು ಘಟನೆ ಇಂದು ನಡೆದಿದ್ದು, ದ್ವಿತೀಯ ಪಿಯುಸಿ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯೋರ್ವಳು ತಾನು ವರ್ಷ ಪೂರ್ತಿ ಓದಿರುವುದು ವ್ಯರ್ಥವಾಯಿತು ಎಂಬುದನ್ನೇ ಮನಸ್ಸಿಗೆ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಈ ಘಟನೆ ಶಿರಸಿ ತಾಲೂಕಿನ ಸಹಸ್ರಳ್ಳಿಯಲ್ಲಿ ನಡೆದಿದೆ.

ತಾಲೂಕಿನ ಯಡಳ್ಳಿ ಸಮೀಪದ ಸಹಸ್ರಳ್ಳಿಯ ಧನ್ಯಾ ಆಚಾರಿ (18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ಶಿರಸಿ ಮಾರಿಕಾಂಬಾ ಪಿಯು ಕಾಲೇಜಿನಲ್ಲಿ ವಿಜ್ಞಾನ ವಿಷಯ ಓದುತ್ತಿದ್ದಳು. ಕಾಲೇಜಿಗೆ ಪ್ರಥಮ ರ್ಯಾಂಕ್ ಬರಬೇಕು ಎಂಬ ಆಶಯವನ್ನು ಹೊಂದಿದ್ದಳು. ಈ ಬಗ್ಗೆ ಶಿರಸಿ ಗ್ರಾಮಿಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ.

- Advertisement -
spot_img

Latest News

error: Content is protected !!