Sunday, May 19, 2024
Homeಆರಾಧನಾಪಾಂಗಾಳದಲ್ಲಿ ಫೆಬ್ರವರಿ 15 ರಂದು ನಡೆಯಲಿದೆ ವೈಭವದ ಸಿರಿಜಾತ್ರೆ

ಪಾಂಗಾಳದಲ್ಲಿ ಫೆಬ್ರವರಿ 15 ರಂದು ನಡೆಯಲಿದೆ ವೈಭವದ ಸಿರಿಜಾತ್ರೆ

spot_img
- Advertisement -
- Advertisement -

ಪಾಂಗಾಳ : ಮುಕ್ಕಾಲಿ ಅಣ್ಣು ಶೆಟ್ಟಿ ಕುಟುಂಬಸ್ಥರ ಆಡಳಿತದ ಶ್ರೀ ಆದಿ ಆಲಡೆ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಂಪ್ರತಿ ಜರಗುವ ವೈಭವದ ಸಿರಿ ಜಾತ್ರೆಯು ಇದೇ ಬರುವ ತಾ . 15-02-2022 ಮಂಗಳವಾರದಂದು ಜರಗಲಿದೆ.

ತಾ 15-02-2022 ನೇ ಮಂಗಳವಾರದಂದು ಬೆಳಗ್ಗೆ 11 ಗಂಟೆಗೆ ಧ್ವಜಾರೋಹಣದಿಂದ ಪ್ರಾರಂಭಗೊಂಡು ಮಧ್ಯಾಹ್ನ 12-30 ಕ್ಕೆ ಮಹಾಪೂಜೆ , 12-45 ಕ್ಕೆ ಬ್ರಾಹ್ಮಣ ಸುಹಾಸಿನಿ ಆರಾಧನೆ , ಸಾರ್ವಜನಿಕ ಅನ್ನಸಂತರ್ಪಣೆಯು ನಡೆಯಲಿದೆ. ರಾತ್ರಿ 08:30 ಕ್ಕೆ ಭಂಡಾರ ಚಾವಡಿಯಿಂದ ಪರಿವಾರ ದೈವಗಳ ಭಂಡಾರ ಹೊರಟು ರಾತ್ರಿ 09:30 ಕ್ಕೆ ವೈಭವ ಬೈಗಿನ ಬಲಿ ನಡೆಯಲಿದೆ.

ರಾತ್ರಿ 11 ಕ್ಕೆ ಕುಮಾರ ದರ್ಶನ, ರಾತ್ರಿ 1 ಕ್ಕೆ ರಂಗಪೂಜೆ, ರಾತ್ರಿ 2:30 ಕ್ಕೆ ಬ್ರಹ್ಮಮಂಡಲ, ರಾತ್ರಿ 3:30 ಕ್ಕೆ ಭೂತಬಲಿ, ರಾತ್ರಿ 4:30 ರಿಂದ ತುಲಾಭಾರ ಸೇವೆಗಳು ನಡೆಯಲಿದೆ. ತಾ. 16.02.2022 ನೇ ಬುಧವಾರ ಬೆಳಿಗ್ಗೆ 11-00 ಕ್ಕೆ ಮಹಾಪೂಜೆ ,ಸಂಜೆ 7-00 ಕ್ಕೆ ತಪ್ಪಂಗಾಯಿ ಬಲಿ, ರಾತ್ರಿ 8:30 ಕ್ಕೆ ದೂಳು ಮಂಡಲ, ನಂತರ ಭೂತಬಲಿ, ಕವಾಟಬಂಧನ, ಶಯನೋತ್ಸವ

ತಾ.17.02.2022 ನೇ ಗುರುವಾರ ಬೆಳಿಗ್ಗೆ 07-00 ಕ್ಕೆ ಕವಾಟೋದ್ಘಾಟನೆ, ನಂತರ ಮಹಾಪೂಜೆ, ಸಾಯಂಕಾಲ 05:00 ಕ್ಕೆ ಬಲಿ ಹೊರಟು ಕಟ್ಟೆಪೂಜೆ, ಅವಭೃತ ಸ್ನಾನ ನಡೆದು ಧ್ವಜಾವರೋಹಣಗೊಳ್ಳುವುದರ ಮೂಲಕ ಮೂರು ದಿನಗಳ ಗೌಣೋತ್ಸವು ಸಮಾಪ್ತಿಯಾಗಲಿದೆ.

ಭಕ್ತಾದಿಗಳು ಕುಟುಂಬ ಸಮೇತರಾಗಿ ಆಗಮಿಸಿ , ಮಹೋತ್ಸವದಲ್ಲಿ ಭಾಗಿಯಾಗಿ ಶ್ರೀ ಬ್ರಹ್ಮಲಿಂಗೇಶ್ವರ ದೇವರ, ನಾಗದೇವರ ಹಾಗೂ ಶ್ರೀ ಧರ್ಮ ದೈವಗಳ ಕೃಪೆಗೆ ಪಾತ್ರರಾಗಿ ಸಿರಿಮುಡಿ ಗಂಧ ಪ್ರಸಾದ ಸ್ವೀಕರಿಸಿ ಕೃತಾರ್ಥರಾಗಬೇಕಾಗಿ ದೇವಸ್ಥಾನದ ಪತ್ರಿಕಾ ಪ್ರಕಟಣೆಯು ತಿಳಿಸಿದೆ.

- Advertisement -
spot_img

Latest News

error: Content is protected !!