- Advertisement -
![]()
- Advertisement -
ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಆರೋಪಿ ಚಿನ್ನಯ್ಯನನ್ನು ಎಸ್.ಐ.ಟಿ ಅಧಿಕಾರಿಗಳು ಮತ್ತೆ ವಿಚಾರಣೆಗೆ ಒಳಪಡಿಸಲು ಸಿದ್ದತೆ ನಡೆಸುತ್ತಿದೆ.
ಬೆಳ್ತಂಗಡಿ ಎಸ್.ಐ.ಟಿ ಅಧಿಕಾರಿಗಳಿಗೆ ಚಿನ್ನಯ್ಯನ ಹೇಳಿಕೆ ಮತ್ತು ಬೆಳ್ತಂಗಡಿ ಕೋರ್ಟ್ ನಲ್ಲಿ ನೀಡಿರುವ BNSS 183 ಹೇಳಿಕೆ ನೀಡುವಾಗ ಒಂದು ವಿಚಾರದಲ್ಲಿ ಸರಿಯಾದ ಮಾಹಿತಿ ನೀಡದ ಕಾರಣದಿಂದ ಎಸ್.ಐ.ಟಿ ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಮತ್ತು ತಂಡ ಮತ್ತೆ ಚಿನ್ನಯ್ಯನನ್ನು ಬೆಳ್ತಂಗಡಿ ಕೋರ್ಟ್ ಅನುಮತಿ ಪಡೆದು ಶಿವಮೊಗ್ಗ ಜೈಲಿನಲ್ಲಿ ವಿಚಾರಣೆ ನಡೆಸಿ ಹೇಳಿಕೆ ಪಡೆಯಲಿದ್ದಾರೆ.
ಬೆಳ್ತಂಗಡಿ ಕೋರ್ಟ್ ನಲ್ಲಿ ತಪ್ಪೋಪ್ಪಿಗೆ ಹೇಳಿಕೆ ನೀಡುವಾಗ ಶವ ದಫನ ಮಾಡಿರುವ ಹೇಳಿಕೆ ನೀಡಿದ್ದು ಈ ವಿಚಾರವನ್ನು ಎಸ್.ಐ.ಟಿ ವಿಚಾರಣೆಯಲ್ಲಿ ಹೇಳಿಕೆ ನೀಡಿರಲ್ಲಿಲ್ಲ. ಈ ವಿಚಾರದಲ್ಲಿ ಚಿನ್ನಯ್ಯ ಬಳಿಯಿಂದ ಆ ಒಂದು ವಿಚಾರದಲ್ಲಿ ಸರಿಯಾದ ಹೇಳಿಕೆ ಪಡೆಯಲು ಎಸ್.ಐ.ಟಿ ಅಧಿಕಾರಿಗಳು ಮುಂದಾಗಿದ್ದಾರೆ.
- Advertisement -


