- Advertisement -
- Advertisement -
ಸುಳ್ಯ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ಸುಳ್ಯ ತಾಲೂಕಿನ ಗುತ್ತಿಗಾರು ವಲಯದ ಮಾವಿನಕಟ್ಟೆ ಎಂಬಲ್ಲಿ ಕೆನರಾ ಬ್ಯಾಂಕಿನ ಸಹಯೋಗದೊಂದಿಗೆ ನೂತನ ಸೇವಾ ಕೇಂದ್ರವನ್ನು ಉದ್ಘಾಟನೆ ಮಾಡಲಾಯಿತು.
ಉದ್ಘಾಟನೆಯನ್ನು ದೇವಚಳ್ಳ ಗ್ರಾಪಂ ಅಧ್ಯಕ್ಷ ರಾದ ಶ್ರೀಮತಿ ಸುಲೋಚನಾ ದೇವ ರವರು ನೆರವೇರಿಸಿದರು. ಈ ಸಂದರ್ಭ , ತಾಲ್ಲೂಕು ಜನ ಜಾಗೃತಿ ವೇದಿಕೆಯ ಸದಸ್ಯರಾದ ರಾಧಾಕೃಷ್ಣ ಕಟೀಲ್, ಪಂಚಾಯತ್ ಸದಸ್ಯರಾದ ಶ್ರೀ ರಮೇಶ್ ಪಡ್ಪು, ವಲಯ ಮೇಲ್ವಿಚಾರಕರಾದ ಮುರಳೀಧರ, ನಗದು ಸಹಾಯಕರಾದ ಶ್ರೀಮತಿ ಜಯಂತಿ ಪ್ರತಾಪ್, ಮಾವಿನಕಟ್ಟೆ ಒಕ್ಕೂಟದ ಅಧ್ಯಕ್ಷರಾದ ಚೇತನ್, ದೇವ ಒಕ್ಕೂಟದ ಅಧ್ಯಕ್ಷರಾದ ನಳಿನಾಕ್ಷ ಹಿರಿಯಡ್ಕ, ಸೇವಾ ಪ್ರತಿನಿಧಿಗಳಾದ ಉಷಾ ಲೋಕೇಶ್ವರ, ಡಿ ಆರ್. ಒಕ್ಕೂಟದ ಪದಾಧಿಕಾರಿಗಳಾದ ತಿರುಮಲೇಶ್ವರ ಸೇರಿದಂತೆ ಸಂಘದ ಸದಸ್ಯರು ಉಪಸ್ಥಿತರಿದ್ದರು
- Advertisement -