Tuesday, April 30, 2024
Homeಕರಾವಳಿಬ್ರಹ್ಮಶ್ರೀ ವಾಟ್ಸಾಪ್ ಗ್ರೂಪ್ ತಂಡದಿಂದ ಅಪಘಾತಕ್ಕೀಡಾದ ಕುಟುಂಬಕ್ಕೆ ನೆರವು

ಬ್ರಹ್ಮಶ್ರೀ ವಾಟ್ಸಾಪ್ ಗ್ರೂಪ್ ತಂಡದಿಂದ ಅಪಘಾತಕ್ಕೀಡಾದ ಕುಟುಂಬಕ್ಕೆ ನೆರವು

spot_img
- Advertisement -
- Advertisement -

ಶಿಶಿಲ: ಜೂ14: ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದ ಕೊಳಕ್ಕೆಬೈಲು ನೆಲ್ಲಿಗುಡ್ಡೆ ನಿವಾಸಿ ಬಾಲಕೃಷ್ಣ ಪೂಜಾರಿರವರು ನೆಲ್ಯಾಡಿ ಸಮೀಪದ ಹೊಸಮಜಲುವಿನಲ್ಲಿ ಕೆಲ ದಿನಗಳ ಹಿಂದೆ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮುಖ, ಕೈ- ಕಾಲುಗಳಿಗೆ ಅತಿಯಾಗಿ ಗಾಯವಾಗಿ ನಾಲಿಗೆಯು ತುಂಡಾಗಿರುತ್ತದೆ.

ಆರ್ಥಿಕ ಸಂಕಷ್ಟದಲ್ಲಿ ಇರುವ ಈ ಕುಟುಂಬಕ್ಕೆ ಬ್ರಹ್ಮಶ್ರೀ ವಾಟ್ಸಾಪ್ ಗ್ರೂಪಿನ ಸದಸ್ಯರಿಂದ ಸಂಗ್ರಹಿಸಿದ ಆರ್ಥಿಕ ನೆರವನ್ನು ಇಂದು ಹಸ್ತಾಂತರಿಸಲಾಯಿತು, ಈ ಸಂಧರ್ಭದಲ್ಲಿ ಬ್ರಹ್ಮಶ್ರೀ ಗುಂಪಿನ ಸದಸ್ಯ ,ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ ಸಂಘಟನ ಕಾರ್ಯದರ್ಶಿ ಸುರೇಂದ್ರ ಕೋಟ್ಯಾನ್ ಬೆಳ್ತಂಗಡಿ, ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ ಅಧ್ಯಕ್ಷ ಎಂ.ಕೆ ಪ್ರಸಾದ್ , ಕಾರ್ಯದರ್ಶಿ ಗುರುರಾಜ್ ಪೂಜಾರಿ ಗುರಿಪಳ್ಳ , ಘಟಕದ ಸಂಘಟನ ಕಾರ್ಯದರ್ಶಿ ರಮೇಶ್ ಬಂಗೇರ ಓಟ್ಲ ಹಾಗೂ ಸ್ಥಳೀಯರಾದ ಪೂವಪ್ಪ ಪೂಜಾರಿ ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!