Friday, April 26, 2024
Homeಕೊಡಗುಕರ್ತವ್ಯದಲ್ಲಿರುವಾಗಲೇ ಹೃದಯಾಘಾತವಾಗಿ ಕೊಡಗಿನ ಯೋಧ ಹುತಾತ್ಮ

ಕರ್ತವ್ಯದಲ್ಲಿರುವಾಗಲೇ ಹೃದಯಾಘಾತವಾಗಿ ಕೊಡಗಿನ ಯೋಧ ಹುತಾತ್ಮ

spot_img
- Advertisement -
- Advertisement -

ಕೊಡಗು: ಕರ್ತವ್ಯದಲ್ಲಿರುವಾಗಲೇ ಹೃದಯಾಘಾತವಾಗಿ ಯೋಧ ಹುತಾತ್ಮವಾಗಿರುವ ಘಟನೆ ಉತ್ತರಾಖಂಡದಲ್ಲಿ ನಡೆದಿದೆ.

ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ತಾಕೇರಿ ಗ್ರಾಮದ ಮಹೇಶ್ (46) ಹುತಾತ್ಮ ಯೋಧ. ಜೂನಿಯರ್ ಕಮಿಷನ್ ಆಫೀಸರ್ (ಜೆಸಿಒ) ಆಗಿ ಇವರು ಉತ್ತರಾಖಂಡದಲ್ಲಿ ಸೇವೆ ಸಲ್ಲಿಸುತ್ತಿದ್ದು, ಕರ್ತವ್ಯನಿರತರಾಗಿದ್ದಾಗಲೇ ಈ ಸಾವು ಸಂಭವಿಸಿದೆ. ಪತ್ನಿ, ಇಬ್ಬರು ಚಿಕ್ಕಮಕ್ಕಳನ್ನು ಅಗಲಿರುವ ಇವರು ಕಳೆದ ತಿಂಗಳಷ್ಟೇ ರಜೆಯಲ್ಲಿ ಊರಿಗೆ ಬಂದು ಹೋಗಿದ್ದರು.

ಮಹೇಶ್ 22 ವರ್ಷಗಳಿಂದ ಭಾರತೀಯ ಸೇನೆಯಲ್ಲಿ‌ ಸೇವೆ ಸಲ್ಲಿಸುತ್ತಿದ್ದರು. ಬೆಂಗಳೂರು, ಹೈದರಾಬಾದ್, ಜಮ್ಮು ಮತ್ತು ಕಾಶ್ಮೀರ, ಉತ್ತರಾಖಂಡ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಇವರು ಸೇವೆ ಸಲ್ಲಿಸಿದ್ದರು. ಇನ್ನೆರಡು ದಿನಗಳಲ್ಲಿ ಹುಟ್ಟೂರಿಗೆ ಇವರ ಪಾರ್ಥಿವ ಶರೀರ ತಲುಪಲಿದೆ.

- Advertisement -
spot_img

Latest News

error: Content is protected !!