Friday, April 19, 2024
Homeತಾಜಾ ಸುದ್ದಿಚಾಲೆಂಜಿಂಗ್ ಸ್ಟಾರ್ ದರ್ಶನ್ ಮೇಲೆ ಚಪ್ಪಲಿ ಎಸೆದ ಕಿಡಿಗೇಡಿಗಳು

ಚಾಲೆಂಜಿಂಗ್ ಸ್ಟಾರ್ ದರ್ಶನ್ ಮೇಲೆ ಚಪ್ಪಲಿ ಎಸೆದ ಕಿಡಿಗೇಡಿಗಳು

spot_img
- Advertisement -
- Advertisement -

ಬೆಂಗಳೂರು; ಚಾಲೆಂಜಿಂಗ್ ಸ್ಟಾರ್ ದರ್ಶನ್ ಮೇಲೆ ಕಿಡಿಗೇಡಿಗಳು ಚಪ್ಪಲಿ ಎಸೆದಿರುವ ಘಟನೆ ಹೊಸಪೇಟೆಯಲ್ಲಿ ನಡೆದಿದೆ.ಈ ಕುರಿತ ವಿಡಿಯೊ ನೆಟ್ಟಿನಲ್ಲಿ‌ ಭಾರೀ ವೈರಲ್‌ ಆಗಿದೆ.

ಕ್ರಾಂತಿ ಸಿನಿಮಾ ಪ್ರಚಾರಕ್ಕೆಂದು ಹೊಸಪೇಟೆಗೆ ತೆರಳಿದ್ದ ವೇಳೆ ಪುನೀತ್ ರಾಜ್‌ಕುಮಾರ್ ಪುತ್ಥಳಿಗೆ ಹೂ ಮಾಲೆ ಹಾಕಿದ ಬಳಿಕ ಕ್ರಾಂತಿ ಸಿನಿಮಾದ ಎರಡನೇ ಹಾಡನ್ನು ರಿಲೀಸ್ ಮಾಡುವುದಕ್ಕೆ ವೇದಿಕೆ ಮೇಲೆ ಬಂದಿದ್ದರು. ಈ ವೇಳೆ ಅವರ ಮೇಲೆ ಚಪ್ಪಲಿ ಎಸೆಯಲಾಗಿದೆ.

ಕಾರ್ಯಕ್ರಮಕ್ಕೆ ದರ್ಶನ್ ನೋಡಲು ಅವರ ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.ಈ ವೇಳೆ ನೂಕು ನುಗ್ಗಲು ಏರ್ಪಟ್ಟಿತ್ತು. ರಚಿತಾ ರಾಮ್ ಮಾತಾಡಲು ಮುಂದಾಗುವಾಗ ದರ್ಶನ್ ಮೇಲೆ ಚಪ್ಪಲಿ ಬಿದ್ದಿದೆ. ಕಿಡಿಗೇಡಿಗಳ ಈ ಕೃತ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ.

ಇನ್ನು ದರ್ಶನ್ ತನ್ನ ಮೇಲೆ ಚಪ್ಪಲಿ ಬಿದ್ದರೂ, ತಲೆಕೆಡಿಸಿಕೊಳ್ಳಲಿಲ್ಲ.ಪಕ್ಕದಲ್ಲಿದ್ದ ಪೊಲೀಸ್ ಅಧಿಕಾರಿ ವೇದಿಕೆ ಮೇಲೆ ಬಿದ್ದ ಚಪ್ಪಲಿಯನ್ನು ಕೆಳಗೆ ಹಾಕಿದರು. ತಕ್ಷಣವೇ ರಚಿತಾ ರಾಮ್‌ಗೆ ಮಾತು ನಿಲ್ಲಿಸುವಂತೆ ಸೂಚನೆ ನೀಡಿ, ಅಲ್ಲಿಂದ ತೆರಳಿದರು ಎನ್ನಲಾಗಿದೆ.

- Advertisement -
spot_img

Latest News

error: Content is protected !!