- Advertisement -
- Advertisement -
ಹಾಸನ; ಕೌಟುಂಬಿಕ ಕಲಹ ಹಿನ್ನಲೆ ಕೆರೆಗೆ ಹಾರಿ ತಾಯಿ ಮಗ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲೂಕಿನ ಕಬ್ಬಳಿ ಗ್ರಾಮದಲ್ಲಿ ನಡೆದಿದೆ. ಜಯಂತಿ (60), ಭರತ್ (35) ಆತ್ಮಹತ್ಯೆಗೆ ಶರಣಾದ ತಾಯಿ-ಮಗ.
ಕಳೆದ ಎಂಟು ತಿಂಗಳ ಹಿಂದಷ್ಟೇ ಭರತ್ ವಿವಾಹವಾಗಿದ್ದರು. ಅರಸೀಕೆರೆ ತಾಲ್ಲೂಕು, ಬಾಗೂರನಹಳ್ಳಿ ಗ್ರಾಮದ ಗೀತಾ ಅವರನ್ನು ಭರತ್ ಮದುವೆಯಾಗಿದ್ದರು. ಅತ್ತೆ-ಸೊಸೆ ನಡುವೆ ಹೊಂದಾಣಿಕೆ ಇಲ್ಲದೆ ಪದೇ ಪದೇ ಜಗಳವಾಗುತ್ತಿತ್ತು ಎನ್ನಲಾಗಿದೆ. ಇದೇ ಕಾರಣಕ್ಕೆ ಪತ್ನಿ ಗೀತಾ ಮನೆ ಬಿಟ್ಟು ಹೋಗಿದ್ದರು. ಎರಡು ಬಾರಿ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ರಾಜಿ-ಪಂಚಾಯ್ತಿ ಮಾಡಿದ್ದರು. ಆದರೂ ಗಂಡನ ಜೊತೆ ಇರದೆ ತವರು ಮನೆಗೆ ಹೋಗಿದ್ದರು. ಇದರಿಂದ ತಾಯಿ-ಮಗ ಮನನೊಂದಿದ್ದರು. ನೆನ್ನೆ ಮುಂಜಾನೆ ಕೆರೆಗೆ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹಿರಿಸಾವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ,
- Advertisement -