- Advertisement -
- Advertisement -
ವಿಶಾಖಪಟ್ಟಣಂ: ಭಾರಿ ಗಾತ್ರದ ಬಂಡೆಯೊಂದು ಉರುಳಿ ಮನೆ ಮೇಲೆ ಬಿದ್ದ ಪರಿಣಾಮ ಗರ್ಭಿಣಿ ಮಹಿಳೆ ಮತ್ತು ಆಕೆಯ ಮೂರು ವರ್ಷದ ಮಗ ದಾರುಣವಾಗಿ ಸಾವಿಗೀಡಾಗಿರುವ ಘಟನೆ ವಿಶಾಖಪಟ್ಟಣಂ ನಗರದ ಗಣಪತಿನಗರದಲ್ಲಿ ನಡೆದಿದೆ.
ಮೃತ ದುರ್ದೈವಿಗಳನ್ನು ಕೆ. ರಾಮಲಕ್ಷ್ಮಿ ಮತ್ತು ಮಗ ಜ್ಞಾನೇಶ್ವರ ಬಾಬು ಎಂದು ಗುರುತಿಸಲಾಗಿದೆ. ಬೆಟ್ಟದಿಂದ ಉರುಳಿದ ಬೃಹತ್ ಬಂಡೆ ಮನೆ ಮೇಲೆ ಬಿದ್ದಿದೆ. ಪರಿಣಾಮ ಮನೆಯ ಮೇಲ್ಛಾವಣಿ ಮತ್ತು ಗೋಡೆ ಕುಸಿದ ಪರಿಣಾಮ ಸ್ಥಳದಲ್ಲೇ ತಾಯಿ ಮತ್ತು ಮಗ ಮೃತಪಟ್ಟಿದ್ದಾರೆ. ಇನ್ನು ಘಟನೆಯಲ್ಲಿ ಮೃತ ಮಹಿಳೆಯ ಪತಿ ಮತ್ತು ತಾಯಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಇನ್ನು ಘಟನೆ ಬಗ್ಗೆ ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯ ನಡೆಸಿ, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಭಾನುವಾರದಿಂದ ವೈಜಾಗ್ನ ಹಲವೆಡೆ ಭಾರಿ ಮಳೆ ಸುರಿದಿದ್ದು, ಮುನ್ನೆಚ್ಛರಿಕಾ ಕ್ರಮವಾಗಿ ಅನೇಕರನ್ನು ಸ್ಥಳಾಂತರಿಸಲಾಗಿದೆ.
- Advertisement -