Friday, June 27, 2025
Homeಚಿಕ್ಕಮಗಳೂರುಚಿಕ್ಕಮಗಳೂರಿನಲ್ಲಿ ಹೆತ್ತ ತಾಯಿಯನ್ನೇ ಕೊಂದ ಪಾಪಿ ಮಗ

ಚಿಕ್ಕಮಗಳೂರಿನಲ್ಲಿ ಹೆತ್ತ ತಾಯಿಯನ್ನೇ ಕೊಂದ ಪಾಪಿ ಮಗ

spot_img
- Advertisement -
- Advertisement -

ಚಿಕ್ಕಮಗಳೂರು: ಪಾಪಿ ಮಗನೊಬ್ಬ ಹೆತ್ತ ತಾಯಿಯನ್ನು ಒಲೆ ಊದುವ ಕೊಳವೆಯಿಂದ ಹೊಡೆದು ಕೊಂದಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಹಚ್ಚಡಮನೆ ಗ್ರಾಮದಲ್ಲಿ ನಡೆದಿದೆ.

ಲತಾ ಕೊಲೆಯಾದವರು. ಅವರ ತಲೆಗೆ ಹೊಡೆದು ಕೊಲೆ ಮಾಡಿದ ಪುತ್ರ ಬಸವರಾಜನ ಕೃತ್ಯ ಪೊಲೀಸರ ತನಿಖೆಯಲ್ಲಿ ಬಯಲಿಗೆ ಬಂದಿದೆ.

ಬಸವರಾಜ ತಾಯಿಯನ್ನು ಕೊಂದು ಡೀಸೆಲ್ ಹಾಕಿ ಮೃತದೇಹ ಸುಟ್ಟುಹಾಕಿದ್ದ. ಮಲಗಿದ್ದ ವೇಳೆ ಮೇಣದಬತ್ತಿಯ ಬೆಂಕಿ ತಗುಲಿ ಮೃತಪಟ್ಟಿದ್ದಾರೆ ಎಂದು ಗ್ರಾಮಸ್ಥರನ್ನು ನಂಬಿಸಿ ತರಾತುರಿಯಲ್ಲಿ ಶವ ಸಂಸ್ಕಾರ ನೆರವೇರಿಸಿದ್ದ. ಜುಲೈ 18 ರಂದು ನಡೆದ ಘಟನೆಯ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದರು. ಪೊಲೀಸರ ತನಿಖೆಯ ವೇಳೆ ಪುತ್ರನೇ ಹಣಕಾಸಿನ ವಿಚಾರದಲ್ಲಿ ತಾಯಿಯನ್ನು ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಆಲ್ದೂರು ಠಾಣೆ ಪೊಲೀಸರು ಆರೋಪಿ ಬಸವರಾಜನನ್ನು ಬಂಧಿಸಿದ್ದಾರೆ.

- Advertisement -
spot_img

Latest News

error: Content is protected !!