Wednesday, April 24, 2024
Homeತಾಜಾ ಸುದ್ದಿಕೇಂದ್ರದ ಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಸೋನಿಯಾ ಗಾಂಧಿ

ಕೇಂದ್ರದ ಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಸೋನಿಯಾ ಗಾಂಧಿ

spot_img
- Advertisement -
- Advertisement -

ನವದೆಹಲಿ: ಕೊರೋನಾ ವೈರಸ್ ನಿಯಂತ್ರಣಕ್ಕಾಗಿ ದೇಶಾದ್ಯಂತ ಲಾಕ್​ಡೌನ್‌ ವಿಧಿಸಲಾಗಿದ್ದು, ಇದರಿಂದ ಬಡವರಿಗೆ ಸಮಸ್ಯೆಯಾಗದಿರಲು ಕೇಂದ್ರ ಸರ್ಕಾರ ಕಡಿಮೆ ಬೆಲೆಯಲ್ಲಿ ಆಹಾರ ಧಾನ್ಯಗಳನ್ನು ನೀಡುವ ಯೋಜನೆ ಜಾರಿಗೊಳಿಸಿದೆ. ಈ ನಿರ್ಧಾರಕ್ಕೆ ಸೋನಿಯಾ ಗಾಂಧಿ ಸಂತಸ ವ್ಯಕ್ತಪಡಿಸಿದ್ದಾರೆ.

ಈ ಹಿಂದೆಯೂ ಕೂಡ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದ ಸೋನಿಯಾ ಗಾಂಧಿ ಇದೀಗ ಮತ್ತೊಮ್ಮೆ ಪತ್ರ ಬರೆದು, ಲಾಕ್​ಡೌನ್​ ವೇಳೆ ದೇಶದ ಯಾವುದೇ ಪ್ರಜೆ ಹಸಿವಿನಿಂದ ತೊಂದರೆಗೆ ಸಿಲುಕಬಾರದು ಎಂದಿದ್ದಾರೆ.

ಕಡಿಮೆ ಬೆಲೆಯಲ್ಲಿ ನೀಡುವ ರೇಷನ್ ಅನ್ನು ಮುಂದಿನ ಸೆಪ್ಟೆಂಬರ್​ವರೆಗೂ ವಿಸ್ತರಿಸಬೇಕು. ದೇಶದಲ್ಲಿ ಲಕ್ಷಾಂತರ ಜನರು ಆಹಾರ ತೊಂದರೆಯಿಂದ ಬಳಲುತ್ತಿದ್ದಾರೆ. ಅವರಿಗೆ ಯಾವ ರೀತಿಯಲ್ಲೂ ಸಮಸ್ಯೆ ಆಗದಂತೆ ನೋಡಿಕೊಳ್ಳಿ ಎಂದು ಹಿರಿಯ ಕಾಂಗ್ರೆಸ್ ನಾಯಕಿ ಸಲಹೆ ನೀಡಿದ್ದಾರೆ.

- Advertisement -
spot_img

Latest News

error: Content is protected !!