Tuesday, May 7, 2024
Homeಕರಾವಳಿಕೊಕ್ಕಡದಲ್ಲಿ ದರೋಡೆ ಪ್ರಕರಣ: 9 ಆರೋಪಿಗಳನ್ನು ಬಂಧಿಸಿದ ಪೊಲೀಸರು

ಕೊಕ್ಕಡದಲ್ಲಿ ದರೋಡೆ ಪ್ರಕರಣ: 9 ಆರೋಪಿಗಳನ್ನು ಬಂಧಿಸಿದ ಪೊಲೀಸರು

spot_img
- Advertisement -
- Advertisement -

ಧರ್ಮಸ್ಥಳ:  ಕೊಕ್ಕಡ ಸೌತಡ್ಕ ಸಮೀಪದ ಕೌಕ್ರಾಡಿ ಗ್ರಾಮದ ನೂಜೆ ನಿವಾಸಿ ವಿಶ್ವ ಹಿಂದೂ ಪರಿಷತ್‌ನ ವಲಯ ಅಧ್ಯಕ್ಷ, ಸಾಮಾಜಿಕ ಕಾರ್ಯಕರ್ತ ತುಕ್ರಪ್ಪ ಶೆಟ್ಟಿಯವರ ಮನೆ ದರೋಡೆ, ಪ್ರಕರಣದಲ್ಲಿ ಭಾಗಿಯಾಗಿದ್ದ 9 ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಅಬ್ದುಲ್ ರವೂಫ್ (24), ರಾಮ ಮೂರ್ತಿ (23) ಅಶ್ರಫ್ ಪೆರಾಡಿ(27), ಸಂತೋಷ್(24), ನವೀದ್(36), ರಮಾನಂದ ಎನ್ ಶೆಟ್ಟಿ(48),ಸುಮನ್(24) , ಸಿದ್ಧಿಕ್(27), ಅಲಿಕೋಯಾ ಇವರುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಆರೋಪಿಗಳಿಂದ ಕೃತ್ಯಕ್ಕೆ ಬಳಸಿರುವ ಮಾರಕಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ಆರೋಪಿಗಳ ತಂಡವು ಬೆಂಗಳೂರು ವಿಜಯನಗರದಲ್ಲಿ ಮನೆಕಳ್ಳತನಕ್ಕೆ ಯತ್ನ, ಅರೆಹಳ್ಳಿ ಪೊಲೀಸ್‌ಠಾಣೆ ವ್ಯಾಪ್ತಿಯಲ್ಲಿ, ಪುಂಜಾಲಕಟ್ಟೆಯಲ್ಲಿ ಮನೆಕಳ್ಳತನ, ಮೂಡಬಿದಿರೆ, ಬಜಪೆ, ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ನಡೆದ ಸರಣಿ ದರೋಡೆಯಲ್ಲಿ ಭಾಗಿಯಾಗಿರುವುದಾಗಿ ತನಿಖೆಯಿಂದ ತಿಳಿದುಬಂದಿದೆ.

ಈ ಬಗ್ಗೆ ಆರೋಪಿಗಳ ವಿಚಾರಣೆಯ ಬಳಿಕ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ. ಇಂತಹ ಕೃತ್ಯದಲ್ಲಿ ಶಾಮೀಲಾಗಿರುವ ಹಾಗೂ ಕೃತ್ಯಕ್ಕೆ ಸಹಕಾರ ನೀಡಿದ ಇನ್ನಿತರ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

- Advertisement -
spot_img

Latest News

error: Content is protected !!