ಬೆಳ್ತಂಗಡಿ : ಚುನಾವಣಾ ಪೂರ್ವ ತಯಾರಿ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಎಸ್ಪಿ ವಿಕ್ರಮ್ ಅಮಟೆ ಬೆಳ್ತಂಗಡಿಗೆ ಆಗಮಿಸಿ ಚೆಕ್ ಪೋಸ್ಟ್ ಗಳನ್ನು ಪರಿಶೀಲನೆ ನಡೆಸಿ ಪೊಲೀಸರ ಜೊತೆ ಸಭೆ ನಡೆಸಿದರು.
ಚಾರ್ಮಾಡಿ ಚೆಕ್ ಪೋಸ್ಟ್ , ಕೊಕ್ಕಡ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ ಚುನಾವಣಾ ಪೂರ್ವ ತಯಾರಿ ಬಗ್ಗೆ ಪರಿಶೀಲನೆ ನಡೆಸಿ ಮತ್ತು ಕರ್ತವ್ಯದ ಬಗ್ಗೆ ಮಾಹಿತಿ ನೀಡಿದರು. ಬಳಿಕ ಚಾರ್ಮಾಡಿ ಗ್ರಾಮ ಪಂಚಾಯತ್ ಕಟ್ಟಡದ ಸಭಾಂಗಣದಲ್ಲಿ ಸಾರ್ವಜನಿಕರ ಜೊತೆ ಚುನಾವಣೆಯ ಬಗ್ಗೆ ಮಾಹಿತಿ ಕಾರ್ಯಗಾರ ನಡೆಸಿದರು.
ಚೆಕ್ ಪೋಸ್ಟ್ ಭೇಟಿ ವೇಳೆ ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸತ್ಯನಾರಾಯಣ , ಧರ್ಮಸ್ಥಳ, ವೇಣೂರು, ಪುಂಜಾಲಕಟ್ಟೆ ಸರ್ಕಲ್ ಇನ್ಸ್ಪೆಕ್ಟರ್ ಶಿವಕುಮಾರ್ , ಧರ್ಮಸ್ಥಳ ಸಬ್ ಇನ್ಸ್ಪೆಕ್ಟರ್ ಅನಿಲ್ ಕುಮಾರ್ ಹಾಗೂ ಸಿಬ್ಬಂದಿ ಜೊತೆಯಲ್ಲಿದ್ದರು.
ಪರಿಶೀಲನೆ ಬಳಿಕ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ತಾಲೂಕಿನ ಪೊಲೀಸರ ಜೊತೆ ಚುನಾವಣೆಯ ಬಗ್ಗೆ ಯಾವ ರೀತಿಯಲ್ಲಿ ಕರ್ತವ್ಯ ನಿರ್ವಹಿಸಬೇಕು. ಚೆಕ್ ಪೊಸ್ಟ್ ಗಳಲ್ಲಿ ಯಾವ ರೀತಿಯಲ್ಲಿ ತಪಾಸಣೆ ನಡೆಸಬೇಕು ಎಂದು ತಿಳಿಸಿದರು.