- Advertisement -
- Advertisement -
ಬೆಳ್ತಂಗಡಿ: ವಿಧಾನ ಸಭಾ ಸ್ವೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಇಂದು ರಾತ್ರಿ 8:30 ಕ್ಕೆ ಅಗಮಿಸಿದ್ದಾರೆ.
ಮಂಗಳೂರು ಏರ್ ಪೊರ್ಟ್ ನಿಂದ ಇನೊವಾ ಕಾರಿನಲ್ಲಿ ರಸ್ತೆ ಮೂಲಕ ಶ್ರೀ ಕ್ಷೇತ್ರ ಧರ್ಮಸ್ಥಳ ಸನ್ನಿಧಿ ಅತಿಥಿ ಗೃಹಕ್ಕೆ ಅಗಮಿಸಿದ್ದು ಅವರನ್ನು ಬೆಳ್ತಂಗಡಿ ತಹಶೀಲ್ದಾರ್ ಮಹೇಶ್.ಜೆ, ಪುತ್ತೂರು ಎಸಿ ಯತೀಶ್ ಉಳ್ಳಾಲ್ ಮತ್ತಿತರ ಅಧಿಕಾರಿಗಳು ಪುಸ್ತಕ ನೀಡುವ ಮೂಲಕ ಸ್ವಾಗತಿಸಿದರು.
ಇಂದು ಸನ್ನಿಧಿ ವಸತಿ ಗೃಹದಲ್ಲಿ ವಾಸ್ತವ್ಯ ಮಾಡಿ ನಾಳೆ ಬೆಳಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ದೇವರ ದರ್ಶನ ಪಡೆದು ನಂತರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿದೆ.
- Advertisement -