- Advertisement -
- Advertisement -
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಪರ್ಯಾಯ ಶ್ರೀ ಅದಮಾರು ಮಠದ ಪರ್ಯಾಯ ಮಂಗಲೋತ್ಸವದ ‘ ವಿಶ್ವಾರ್ಪಣಮ್ ‘ ಸಮಾರಂಭದಲ್ಲಿ , ಪರ್ಯಾಯ ಪೀಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು , ಅಪಾರ ಜಿಲ್ಲಾಧಿಕಾರಿಗಳಾಗಿ ನಿವೃತ್ತರಾದ ಎಸ್.ಎ.ಪ್ರಭಾಕರ ಶರ್ಮ , ಮಂಗಳೂರು ಇವರನ್ನು ಸನ್ಮಾನಿಸಿದರು.
ಎಡನೀರು ಮಠಾಧೀಶರಾದ ಶ್ರೀಸಚ್ಚಿದಾನಂದ ಭಾರತೀತೀರ್ಥ ಸ್ವಾಮೀಜಿಯವರು ಉಪಸ್ಥಿತರಿದ್ದರು. ಮಾಜಿ ಕೇಂದ್ರ ಸಚಿವರು ಹಾಗೂ ರಾಜ್ಯಸಭಾ ಸದಸ್ಯರಾದ ಸುಬ್ರಮಣಿಯನ್ ಸ್ವಾಮಿ ಅವರು “ಪ್ರಾಚೀನ ಮತ್ತು ಜೀವಂತವಿರುವ ಹಿಂದೂ ನಾಗರೀಕತೆಯ ಭಾಗವಾಗಿರಲು ಹೆಮ್ಮೆ” ಎಂಬ ವಿಶೇಷ ಉಪನ್ಯಾಸ ನೀಡಿದರು.
ಮಠದ ವ್ಯವಸ್ಥಾಪಕರಾದ ಗೋವಿಂದರಾಜ್ ಮತ್ತು ಎಂ.ಎಲ್.ಸಾಮಗರು ಸ್ವಾಗತಿಸಿದರು.ಆಸ್ಥಾನ ವಿದ್ವಾಂಸರಾದ ಕುತ್ಪಾಡಿ ಕೃಷ್ಣರಾಜ ಭಟ್ ರವರು ಕಾರ್ಯಕ್ರಮ ನಿರ್ವಹಿಸಿದರು .
- Advertisement -