Friday, May 17, 2024
Homeಕರಾವಳಿಉಡುಪಿಕರಾವಳಿ ಜಿಲ್ಲೆಗಳಿಗೆ ಕುಚಲಕ್ಕಿ ವಿತರಣೆಗೆ ರಾಜ್ಯ ಸರ್ಕಾರ ಚಿಂತನೆ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆಯಲ್ಲಿ...

ಕರಾವಳಿ ಜಿಲ್ಲೆಗಳಿಗೆ ಕುಚಲಕ್ಕಿ ವಿತರಣೆಗೆ ರಾಜ್ಯ ಸರ್ಕಾರ ಚಿಂತನೆ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ವಿಶೇಷ ಸಭೆ

spot_img
- Advertisement -
- Advertisement -

ಬೆಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಪ್ರಮುಖ ಆಹಾರಧಾನ್ಯವಾದ ಕುಚ್ಚಲಕ್ಕಿ ವಿತರಣೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ವಿಧಾನಸೌಧದಲ್ಲಿಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆಯಲ್ಲಿ ವಿಶೇಷ ಸಭೆ ನಡೆಯಿತು.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಕುಚ್ಚಲಕ್ಕಿ ವಿತರಣೆ ಬಹುದಿನಗಳ ಬೇಡಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಚಿಂತನೆ ನಡೆಸಿದ್ದು ಈಗಾಗಲೆ ಕೇರಳ ರಾಜ್ಯಕ್ಕೆ ರಾಜ್ಯದ ನಿಯೋಗ ಭೇಟಿ ನೀಡಿ ಅಧ್ಯಯನ ನಡೆಸಿದೆ ಎಂದು ಈ ಸಂದರ್ಭದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಕರಾವಳಿ ಜಿಲ್ಲೆಗಳಿಗೆ ಪ್ರತಿ ತಿಂಗಳು 1ಲಕ್ಷ ಕ್ವಿಂಟಾಲ್ ಅಕ್ಕಿ ಅಗತ್ಯವಿದ್ದು, ವರ್ಷಕ್ಕೆ 12ಲಕ್ಷ ಕ್ವಿಂಟಾಲ್ ಅಗತ್ಯವಿದೆ. ಇದಕ್ಕಾಗಿ ವರ್ಷಕ್ಕೆ ಕನಿಷ್ಠ 18ಲಕ್ಷ ಕ್ವಿಂಟಾಲ್ ಭತ್ತ ಅಗತ್ಯವಿದೆ ಎಂದು ಸಚಿವರು ಹೇಳಿದರು.

ಜಯ, ಜ್ಯೋತಿ, ಎಂಎಫ್4 ಅಂತಹ ಭತ್ತದ ತಳಿಗಳಿಂದ ಮಾತ್ರ ಕುಚಲಕ್ಕಿ ಮಾಡಲು ಸಾಧ್ಯವಿದ್ದು, ಈ ಎರಡು ಜಿಲ್ಲೆಗಳಿಂದ ಕೇವಲ ಎರಡೂವರೆ ಲಕ್ಷ ಕ್ವಿಂಟಾಲ್ ಭತ್ತ ಮಾತ್ರ ಉತ್ಪಾದನೆಯಾಗುತ್ತಿದೆ. ಇನ್ನುಳಿದ ಭತ್ತವನ್ನು ಮೈಸೂರು, ಮಂಡ್ಯ, ಶಿವಮೊಗ್ಗ, ಬೆಳಗಾವಿ ಜಿಲ್ಲೆಗಳಿಂದ ಖರೀದಿಗೆ ಕ್ರಮ ವಹಿಸಲಾಗುವುದು. ಆದರೆ ಪೂರ್ಣ ಪ್ರಮಾಣದಲ್ಲಿ ಭತ್ತ ಸಿಗುತ್ತಿಲ್ಲ ಎಂದಿದ್ದಾರೆ.

ಈ ಸಂಬಂಧ ಹೆಚ್ಚುವರಿ ಬೇಡಿಕೆಯನ್ನು ಕೇರಳ ಮತ್ತು ತೆಲಂಗಾಣ ಜಿಲ್ಲೆಗಳಿಂದ ಭತ್ತ ಪೂರೈಸಿಕೊಳ್ಳಲು ಯೋಜಿಸಲಾಗಿದೆ. ಈ ಸಂಬಂಧ ಈ ವಾರಾಂತ್ಯದಲ್ಲಿ ಮತ್ತೊಂದು ಅಧ್ಯಯನ ತಂಡ ತೆಲಂಗಾಣಕ್ಕೆ ಭೇಟಿ ನೀಡಲಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಅಧ್ಯಯನ ತಂಡಗಳ ವರದಿ ಆಧರಿಸಿ ಕರಾವಳಿ ಜಿಲ್ಲೆಗಳ ಶಾಸಕರು ಹಾಗೂ ಸಂಸದರ ನಿಯೋಗದೊಂದಿಗೆ ಮಾನ್ಯ ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಬರುವ ವರ್ಷದಿಂದಲೇ ಈ ಜಿಲ್ಲೆಗಳಿಗೆ ಕುಚಲಕ್ಕಿ ವಿತರಣೆಗೆ ಕ್ರಮ ವಹಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.

ಸಭೆಯಲ್ಲಿ ಅಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಆಯುಕ್ತೆ ಕನಗವಲ್ಲಿ, ರಾಜ್ಯ ಆಹಾರ ನಿಗಮದ ಉಪಾಧ್ಯಕ್ಷ ಕಿರಣ್ ಕುಮಾರ್ ಕೋಡ್ಗಿ, ಅಹಾರ ನಿಗಮದ ವ್ಯವಸ್ಥಾಪಕ ನಿರ್ದೇಶಕ ಬಸವರಾಜ ಸೋಮಣ್ಣನವರ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ವಿಜಯಕುಮಾರ್ ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!